ಜನ ಮನದ ನಾಡಿ ಮಿಡಿತ

Advertisement

ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಭೀಕರ ಅಫಘಾತ ಉಜಿರೆಯ ಉದ್ಯಮಿ ಎಂ ಆರ್ ನಾಯಕ್ ಪುತ್ರ ಪ್ರಜ್ವಲ್ ಮೃತ್ಯು

ಬೆಳ್ತಂಗಡಿ: ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಮೃತಪಟ್ಟಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
ಅಪಘಾತದಲ್ಲಿ ನಿಧನ ಹೊಂದಿದ ಪ್ರಜ್ವಲ್ ನಾಯಕ್ ಅವರು ಬೆಳ್ತಂಗಡಿ ಸಂತೆಕಟ್ಟೆ ನಿವಾಸಿ ಹೆಸರಾಂತ ಉದ್ಯಮಿ, ಸಂಘ ಸಂಸ್ಥೆಯಲ್ಲಿ ಸಕ್ರಿಯರಾಗಿದ್ದ, ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕ ಪ್ರಮೋದ್ ಆರ್. ನಾಯಕ್ ಅವರ ಪುತ್ರ.
ಉದ್ಯಮಿ ಪ್ರಜ್ವಲ್ ಉಜಿರೆಯ ಡಿ.ಎಂ. ಗೌಡ ಕಾಂಪ್ಲೆಕ್ಸ್ ನಲ್ಲಿ ಗೇಮಿಂಗ್ ಶಾಪ್ ಮಾಲೀಕ ಹಾಗೂ ಉದ್ಯಮಿಯಾಗಿದ್ದರು

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!