ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಸಮೀಪದ ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಬಳಿಯಲ್ಲಿ ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದರು.
ಅದರಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಪೊಲೀಸ್ ಹಾಗೂ ಮುಲ್ಕಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಕಿಲ್ಪಾಡಿ ಪಂಚಾಯತ್ ವತಿಯಿಂದ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ವಾಹನಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಅಪಾಯಕಾರಿ ಒಣಗಿದ ಮರಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಪಿಡಿಓ ಪೂರ್ಣಿಮಾ, ಮೆಸ್ಕಾಂ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮತ್ತು ಸಾಮಾಜಿಕ ಕಾರ್ಯಕರ್ತ ಭೀಮಾಶಂಕರ್ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಹೆದ್ದಾರಿಯ ಕಾರ್ನಾಡ್, ಕೆಂಚನಕೆರೆ,, ಕುಬೆವೂರು ಬಳಿ ಇನ್ನಷ್ಟು ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗ ಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…