ಮುಲ್ಕಿ: ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿಯ ಕಿಲ್ಪಾಡಿ ಪಂಚಾಯತ್ ಸಮೀಪದ ಕುಬೆವೂರು ರೈಲ್ವೆ ಮೇಲ್ಸೇತುವೆ ಬಳಿ ರಸ್ತೆ ಬಳಿಯಲ್ಲಿ ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದರು.
ಅದರಂತೆ ಜಿಲ್ಲಾಧಿಕಾರಿಗಳ ಸೂಚನೆಯಂತೆ ಪೊಲೀಸ್ ಹಾಗೂ ಮುಲ್ಕಿ ಮೆಸ್ಕಾಂ ಇಲಾಖೆಯ ಸಹಕಾರದೊಂದಿಗೆ ಕಿಲ್ಪಾಡಿ ಪಂಚಾಯತ್ ವತಿಯಿಂದ ಕಿನ್ನಿಗೋಳಿ ಮುಲ್ಕಿ ರಾಜ್ಯ ಹೆದ್ದಾರಿ ವಾಹನ ಸಂಚಾರ ಸ್ಥಗಿತಗೊಳಿಸಿ ವಾಹನಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸಿ ಅಪಾಯಕಾರಿ ಒಣಗಿದ ಮರಗಳನ್ನು ತೆರವುಗೊಳಿಸಲಾಯಿತು.
ಈ ಸಂದರ್ಭ ಕಿಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಕಾಸ್ ಶೆಟ್ಟಿ,ಮಾಜೀ ಉಪಾಧ್ಯಕ್ಷ ಗೋಪಿನಾಥ ಪಡಂಗ, ಪಿಡಿಓ ಪೂರ್ಣಿಮಾ, ಮೆಸ್ಕಾಂ ಇಲಾಖೆಯ ಅಧಿಕಾರಿ ಕೃಷ್ಣಪ್ಪ ಮತ್ತು ಸಾಮಾಜಿಕ ಕಾರ್ಯಕರ್ತ ಭೀಮಾಶಂಕರ್ ಸಿಬ್ಬಂದಿ ವರ್ಗ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಹೆದ್ದಾರಿಯ ಕಾರ್ನಾಡ್, ಕೆಂಚನಕೆರೆ,, ಕುಬೆವೂರು ಬಳಿ ಇನ್ನಷ್ಟು ಅಪಾಯಕಾರಿ ಒಣಗಿದ ಮರಗಳಿದ್ದು ತೆರವುಗೊಳಿಸಲು ಅರಣ್ಯ ಇಲಾಖೆ ಮುಂದಾಗ ಬೇಕಾಗಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…