ಜನ ಮನದ ನಾಡಿ ಮಿಡಿತ

Advertisement

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ

ಬ್ರಹ್ಮಾವರ ರೋಟರಿ ಕ್ಲಬ್ ನ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು 27 ರಂದು ಆಶ್ರಯ ಹೋಟೆಲ್ ನಲ್ಲಿ ನಡೆದ ಸರಳ ಸುಂದರ ಸಮಾರಂಭ ನಡೆಯಿತು. ರೋಟರಿ ನಿಯೋಜಿತ ಗವರ್ನರ್ ಕೆ.ಪಾಲಾಕ್ಷ ರವರು ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ನೆರವೇರಿಸಿ ಶುಭ ಹಾರೈಸಿದರು.

ತನ್ನ ತಂದೆಯ ಉದಾತ್ತ ಗುಣಗಳನ್ನು ಮೈಗೂಡಿಸಿಕೊಂಡು, ಸರಳ ಸಜ್ಜನಿಕೆಯೊಂದಿಗೆ,
ಸಮಾಜದ ಹಿರಿಯರನ್ನು ಪೂಜ್ಯ ಭಾವನೆಯಿಂದ ಕಾಣುತ್ತಾ, ತಾನು ಸಂಪಾಧಿಸಿದ ಸಂಪಾದನೆಯಲ್ಲಿ ಒಂದಷ್ಟನ್ನು ಸಮಾಜ ಸೇವೆಗಾಗಿ ವಿನಿಯೋಗಿಸಿ ಸಮಾಜ ಸೇವಕರೆನಿಸಿ ಕೊಂಡಿರುವ, ಪೆಟ್ರೋಲ್ ಪಂಪ್ ಮತ್ತು ಕ್ರಷರ್ ಮಾಲಿಕರೂ ಆಗಿರುವ ಶ್ರೀ ಶ್ರೀಧರ್ ಶೆಟ್ಟಿಯವರು ರೋಟರಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಬ್ರಹ್ಮಾವರ ರೋಟರಿ ಕ್ಲಬ್ ಉತ್ತಮ ಕಾರ್ಯಕ್ರಮಗಳು ಮತ್ತು ಸಮಾಜ ಸೇವೆಯ ಮೂಲಕ ಜನ ಮಾನಸದಲ್ಲಿ ತನ್ನದೇ ಒಂದು ವಿಶೇಷ ಸ್ಥಾನವನ್ನು ಸ್ಥಾಪಿಸುವಲ್ಲಿ ಯಶಸ್ವೀಯಾಗಿದೆ.

ತನ್ನ ಅಧ್ಯಕ್ಷೀಯ ಅವಧಿಯಲ್ಲಿ ರೋಟರಿ ಸಂಸ್ಥೆ ಮಾಡಿಕೊಂಡು ಬಂದಿರುವ ಕಾರ್ಯಕ್ರಮಗಳನ್ನು ಮುಂದುವರಿಸುತ್ತಾ, ಇನ್ನಷ್ಟು ಒಳ್ಳೆಯ ಹೊಸ ಕಾರ್ಯಕ್ರಮಗಳು ಮತ್ತು ಉತ್ತಮ ಕಾರ್ಯದಕ್ಷತೆಯೊಂದಿಗೆ ಕಾರ್ಯ ನಿರ್ವಹಿಸುತ್ತಾ ರೋಟರಿ ಸಂಸ್ಥೆಯ ಕೀರ್ತಿಯನ್ನು ಎತ್ತಿ ಹಿಡಿಯಲು ಪ್ರಯತ್ನಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸಾಧಕ ವಿದ್ಯಾರ್ಥಿ ಪ್ರಜ್ಞಾನ್ .ಪಿ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.ಹರೀಶ್ ಕುಂದರ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ವೇತನ ವಿತರಣೆ, ಹಾಗೂ ನೀಲಮ್ಮ ಚಾರಿಟೇಬಲ್ ಟ್ರಸ್ಟ್ ನಿಂದ ಕ್ಲಬ್ ಗೆ ಧನ ಸಹಾಯ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!