ಕಳೆದ ಎಂಟು ವರುಷಗಳಿಂದ ಇಲ್ಲಿನ ದಾದಿಯರ ಉಪ ಕೇಂದ್ರದ ಪರಿಸ್ಥಿತಿಯ ಬಗ್ಗೆ ಇದೀಗ ಸ್ಥಳೀಯರು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.
ಆಲಡ್ಕ, ಬಂಗ್ಲೆ ಗುಡ್ಡೆ, ನಂದಾವರ ಕೆಲವು ಊರುಗಳು ಸೇರಿ ಒಂದು ಸಾವಿರಕ್ಕಿಂತ ಹೆಚ್ಚು ಮನೆಗಳಿವೆ. ಕಳೆದ ಎಂಟು ವರುಷಗಳ ಮೊದಲು ಇಲ್ಲಿ ಜನಗಳಿಗೆ ಪ್ರಯೋಜನಕಾರಿಯಾಗಿದ್ದ ಕೇಂದ್ರ ಇದೀಗ ಹುಲ್ಲು ಗಿಡಗಳು ಪೊದೆಗಳು ಸುತ್ತಲೂ ಅವರಿಸಿ, ಬೂತಬಂಗಲೆಯಾಗಿ ಮಾರ್ಪಾಡು ಹೊಂದಿದೆ. ಕಾರಣವಿಲ್ಲದೆ ಕೇಂದ್ರವನ್ನು ಬಂದ್ ಮಾಡಿದ ಇಲಾಖೆಯ ಕೆಲಸಕ್ಕೆ ಕೇಂದ್ರ ಬೀಳುವ ಹಂತಕ್ಕೆ ಮುಟ್ಟಿದೆ.
ಎಂಟು ವರ್ಷಗಳಿಂದ ಪಾಳು ಬಿದ್ದಿರುವ ಕೇಂದ್ರದ ಹತ್ತಿರ ಹೋಗಲು ಭಯ ಉಂಟುಮಾಡುವ ಕೇಂದ್ರವನ್ನು ಗಮನಿಸಿದ ಸಾರ್ವನಿಕರು ಇದರ ಬಗ್ಗೆ ಇಲಾಖೆಗೆ ದೂರು ನೀಡಿದ್ದಾರೆ. ಯು ಟಿ ಖದರ್ ಆರೋಗ್ಯ ಸಚಿವರಾಗಿದ್ದ ವೇಳೆ ಅವರ ಬಳಿ ಹೋಗಿ ಮಾಹಿತಿ ನೀಡಿದ್ದಾರೆ ಆದರೆ ಯಾವುದೇ ಪ್ರಯೋಜನ ಆಗಲಿಲ್ಲ ಅಂತ ಗ್ರಾಮಸ್ಥರು ತಿಳಿಸಿದ್ದಾರೆ.
ಶಾಸಕರ ಗಮನಕ್ಕೆ ತಂದು ವ್ಯವಸ್ಥೆ ಮಾಡುತ್ತೇವೆ : ಖಾಲಿದ್ ಗ್ರಾಮಸ್ಥ .
ಕಳೆದ ಎಂಟು ವರ್ಷಗಳಿಂದ ದುಸ್ಥಿತಿಯಲ್ಲಿ ಕೇಂದ್ರವನ್ನು ಸ್ಥಳೀಯ ಶಾಸಕರ ಗಮನಕ್ಕೆ ತರುತ್ತೇವೆ . ಈವರೆಗೆ ಅವರಿಗೆ ಗ್ರಾಮಸ್ಥರು ಯಾರೂ ಕೂಡ ತಿಳಿಸಿಲ್ಲ ಎಂದು ಗೊತ್ತಾಗಿದೆ.
ಸರಕಾರದ ಸೊತ್ತು ಈ ರೀತಿಯಲ್ಲಿ ದುರ್ಬಳಕೆ ಆಗಬಾರದು ಮತ್ತು ಜನರಿಗೆ ಸದ್ಬಳಕೆಯಾಗುವ ನಿಟ್ಟಿನಲ್ಲಿ ಶಾಸಕರ ಬಳಿ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…