ಉಳ್ಳಾಲ: ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್ ಆಚಾರ್ಯ ಎಂಬವರ ಪುತ್ರ ಗಣೇಶ್ ಆಚಾರ್ಯ ( 27) ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಫಸ್ಟ್ ನ್ಯುರೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯಲು ಸಹಕರಿಸಿದ ಹಿತೈಷಿಗಳ,ಸಂಬಂಧಿಕರ, ಸ್ನೇಹಿತರ ಪ್ರಾರ್ಥನೆ ಕೊನೆಗೂ ಈಡೇರಲಿಲ್ಲ.
ಜೂ.೨೮ ರಂದು ಗಣೇಶ ಪಾವೂರು ಹರೇಕಳ ಕಡೆಯಿಂದ ಕೊಣಾಜೆ ಕಡೆಗೆ ತೆರಳುವ ಸಂದರ್ಭ ಬೆಳಿಗ್ಗೆ ೧೧.೫೦ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್ ಕಚೇರಿಯ ಎದುರುಗಡೆ ಅಪಘಾತ ಸಂಭವಿಸಿದೆ. ಟಿಪ್ಪರ್ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ನಡೆಸಿ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ತಕ್ಷಣ ಟಿಪ್ಪರ್ ಚಾಲಕ ಸೇರಿದಂತೆ ಸ್ಥಳೀಯರು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಅಡ್ಯಾರ್ ಫಸ್ಟ್ ನ್ಯುರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಂಗಳೂರಿನಲ್ಲಿ ಎ.ಸಿ ಮೆಕ್ಯಾನಿಕ್ ಆಗಿದ್ದ ಗಣೇಶ್, ಮನೆಯ ಹಿರಿಯ ಪುತ್ರನಾಗಿದ್ದು, ಜೀವನಾಧಾರವಾಗಿದ್ದರು. ಮೃತರು ತಾಯಿ, ತಂದೆ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ. ಟಿಪ್ಪರ್ ಲಾರಿ ಚಾಲಕ ಮಹಮ್ಮದ್ ಹನೀಫ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತ ಗಣೇಶ್ ಆಚಾರ್ಯ ಶಸ್ತ್ರಚಿಕಿತ್ಸೆಗೆ ರೂ.10 ಲಕ್ಷ ಖರ್ಚಾಗುವುದರಿಂದ ಸ್ನೇಹಿತರು ವಾಟ್ಸ್ಯಾಪ್ ಮೂಲಕ ದಾನಿಗಳ ಸಹಕಾರವನ್ನು ಕೋರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…