ಪ್ರತಿಯೊಬ್ಬರಿಗೆ ಬೇಕಾದ ವ್ಯಕ್ತಿ ಅಂದ್ರೆ ವೈದ್ಯರು. ಅವರ ಮಹತ್ವದ ಬಗ್ಗೆ ಹೇಳಬೇಕೆನಿಲ್ಲ. ನಮ್ಮಲ್ಲಿ ಸಾಮಾಜಿಕ ಮತ್ತು ಮಾನಸಿಕವಾಗಿ ಕಾಪಾಡಿ ಕೊಳ್ಳುವುದು ವೈದ್ಯರು ಎಂದು ದಾಮಸ್ ಕಟ್ಟೆ ಕಿರೆಂ ಚರ್ಚ್ ಧರ್ಮಗುರು ರೆ ಫಾ ಓಸ್ವಲ್ಡ್ ಮೊಂತೇರೊ ಹೇಳಿದರು.
ಅವರು ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ (ರಿ ) ಉಚಿತ ವೈದ್ಯಕೀಯ ಮತ್ತು ದಂತ ಚಿಕಿತ್ಸಾಲಯ ಇವರ ಆಶ್ರಯದಲ್ಲಿ ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜ್ ದೇರಳಕಟ್ಟೆ, ಎಬಿ ಶೆಟ್ಟಿ ಸ್ಮಾರಕ ದಂತ ವಿದ್ಯಾಲಯ ನಿಟ್ಟೆ ಇವರ ಸಹಭಾಗಿತ್ವದಲ್ಲಿ ತಾಳಿಪಾಡಿ ಗುತ್ತಿನಲ್ಲಿ ನಡೆದ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದರು.
ಈ ಸಂದರ್ಭ ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ (ರಿ )
ನಿಟ್ಟೆ ಗ್ರಾಮೀಣ ವೈದ್ಯಕೀಯ ಚಿಕಿತ್ಸಾಲಾಯ ಮೆಡಿಕಲ್ ಆಫೀಸರ್ ಡಾ. ಅರುಣ್ ಶೆಟ್ಟಿ ಮತ್ತು ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿ
ನಿಟ್ಟೆ ರೂರಲ್ ಹೆಲ್ತ್ ಸೆಂಟರ್ ದಂತ ವೈದ್ಯೆ ಡಾ|| ಶೀತಲ್ ಜೆ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ದಲ್ಲಿ ಸಾಮಾಜಿಕ ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದ ಭುವನಾಭಿರಾಮ ಉಡುಪ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಲವ ಕೆ ಶೆಟ್ಟಿ ಇವರನ್ನು ಗೌರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಳಿಪಾಡಿ ಗುತ್ತು ಜನಕಲ್ಯಾಣ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ಪಾದಮನೆ ತಾಳಿಪಾಡಿ ಗುತ್ತು ಅಧ್ಯಕ್ಷತೆಯನ್ನು ವಹಿಸಿದ್ದರು. ತಾಳಿಪಾಡಿ ಗುತ್ತು ಶ್ರೀ ದಿನೇಶ್ ಬಂಡ್ರಿಯಾಲ್, ಸುರಗಿರಿ ಮಹಾಲಿಂಗೇಶ್ವರ ದೆವಸಂದ ಆಡಳಿತ ಮಂಡಳಿಯ ಸದಸ್ಯ ಧನಂಜಯ ಶೆಟ್ಟಿಗಾರ್ ಉಪಸ್ಥಿತರಿದ್ದರು. ದಾಮೋದರ ದಾಮೋದರ ಶೆಟ್ಟಿ ಸ್ವಾಗತಿಸಿದರು ಕುಶಲ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…