ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿಯ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದಾರೆ. ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ ನನ್ನು ಹತ್ಯೆ ಮಾಡಿದವರು , ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು ,ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರೂ ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…