ಉಡುಪಿ: ಲೋಕಸಭೆಯಲ್ಲಿ ವಿಪಕ್ಷ ನಾಯಕನ ಜವಾಬ್ದಾರಿಯ ಹುದ್ದೆಯಲ್ಲಿರುವ ರಾಹುಲ್ ಗಾಂಧಿ ಮತೀಯ ಅಲ್ಪಸಂಖ್ಯಾತರ ಓಲೈಕೆಗಾಗಿ ಹಿಂದೂತ್ವ, ರಾಷ್ಟೀಯ ಸ್ವಯಂ ಸೇವಕ ಸಂಘ, ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಹೇಳನ ಮಾಡುವ ಮೂಲಕ ತಮ್ಮ ನೈತಿಕ ಅಧಃಪತನವನ್ನು ಜಗಜ್ಜಾಹೀರು ಮಾಡಿದ್ದಾರೆ. ಹಿಂದೂಗಳ ತಾಳ್ಮೆ ಪರೀಕ್ಷೆ ಮಾಡುವ ದುಸ್ಸಾಹಸಕ್ಕೆ ಮುಂದಾಗಬೇಡಿ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಧರ್ಮಕ್ಕೆ ಪ್ರೀತಿ ಸಹೋದರತೆಯ ಪಾಠ ಮಾಡುವ ಮೊದಲು ಅಂದು 5 ಲಕ್ಷ ಕಾಶ್ಮೀರಿ ಹಿಂದೂಗಳನ್ನು ಓಡಿಸಿದವರು, ಅಮಾಯಕ ಕನಯ್ಯಲಾಲ್ ನನ್ನು ಹತ್ಯೆ ಮಾಡಿದವರು , ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರು, ಡಿಜೆ ಹಳ್ಳಿ, ಕೆಜೆ ಹಳ್ಳಿಯಲ್ಲಿ ದಲಿತನ ಮನೆ ಪೊಲೀಸ್ ಠಾಣೆಗೆ ಬೆಂಕಿ ಇಟ್ಟವರು, ಪಿಎಫ್ಐ ಜೊತೆ ಸೇರಿ ಭಯೋತ್ಪಾದನೆ ಮಾಡಿ ದೇಶದ್ರೋಹ ಮಾಡಿದವರು ,ಉಡುಪಿ ಶಾಲೆಯಲ್ಲಿ ಹಿಜಾಬ್ ವಿವಾದ ಸೃಷ್ಟಿಸಿ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತಂದವರು ಯಾರೂ ಎಂಬುದನ್ನು ಕೂಡಾ ಲೋಕಸಭೆಯಲ್ಲಿ ಹೇಳುವ ಧೈರ್ಯ ರಾಹುಲ್ ಗಾಂಧಿಗೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಹಿಂದೂ ಧರ್ಮಕ್ಕೆ ಹಿಂಸೆಯ ಬಣ್ಣ ಬಳಿಯುವ ಮೂಲಕ ಸನಾತನ ಹಿಂದೂ ಧರ್ಮಕ್ಕೆ ರಾಹುಲ್ ಗಾಂಧಿ ಅಪಮಾನ ಮಾಡಿದ್ದಾರೆ. 49 ಸೀಟುಗಳು ಕೊಟ್ಟಾಗ ಹಿಂದುತ್ವ ಕೆಟ್ಟದು ಹಿಂದುಗಳು ಒಳ್ಳೆಯವರು ಎಂದಿದ್ದ ಯಾವಾಗ 99 ಸೀಟುಗಳು ಸಿಕ್ಕಿದ ಕೂಡಲೇ ಈಗ ಹಿಂದೂಗಳೇ ಹಿಂಸೆ ಮಾಡುವವರು ಎನ್ನುವ ಮೂಲಕ ತಮ್ಮ ಹಿಂದೂ ವಿರೋಧಿ ನಿಲುವನ್ನು ಪ್ರದರ್ಶಿಸಿದ್ದಾರೆ. ಜಾಗೃತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರವನ್ನು ನೀಡುವ ಅನಿವಾರ್ಯತೆ ಇದೆ ಎಂದು ತಿಳಿಸಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…