ಉಡುಪಿ: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷೆ ಶೋಭಾ ಡಿ. ನಾಯ್ಕ್ ಅವರನ್ನು ಉಚ್ಚಾಟಿಸಿ ಆದೇಶಿಸಲಾಗಿದೆ.
ಉಡುಪಿ ವಿಧಾನಸಭಾ ಕ್ಷೇತ್ರದ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, ಪಕ್ಷದ ಚೌಕಟ್ಟು ಮೀರಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರು ಮತ್ತು ನಾಯಕರ ಮೇಲೆ ಸುಳ್ಳು ಕೇಸನ್ನು ದಾಖಲಿಸಿದ್ದು, ಪಕ್ಷಕ್ಕೆ ತಾವು ಮುಜುಗರ ಮಾಡುವಂತ ಸನ್ನಿವೇಶವನ್ನು ನಿರ್ಮಾಣ ಮಾಡಿದ ಕಾರಣಕ್ಕಾಗಿ ಉಚ್ಚಾಟಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಈಗಾಗಲೇ ಪಂಚಾಯತ್ಗೆ ಸಂಬಂಧ ಪಟ್ಟಕೆಲವೊಂದು ನಿರ್ಧಾರಗಳನ್ನು ಪಕ್ಷದ ಪಂಚಾಯತ್ ಸದಸ್ಯರ ಗಮನಕ್ಕೆ ತರದೆ ಭ್ರಷ್ಟಾಚಾರ ಮಾಡಿರುವುದು ಮೇಲ್ನೋಟಕ್ಕೆ ಸಾಬೀತಾಗಿದ್ದು ಹಾಗು ತಮ್ಮ ಅಶಿಸ್ತಿನ ವರ್ತನೆಗಾಗಿ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…