,ಮೂಲ್ಕಿ:ವಿದ್ಯಾರ್ಥಿಗಳಲ್ಲಿ ಕಠಿಣ ಪರಿಶ್ರಮ,ಸಮರ್ಪಣಾ ಮನೋಭಾವ ಹಾಗೂ ಕಠಿಣ ನಿರ್ಧಾರವಿದ್ದಾಗ ಮಾತ್ರ ಯಶಸ್ಸು ಸಾಧ್ಯ, ನಮ್ಮಲ್ಲಿರುವ ಸಮಯವನ್ನು ಸರಿಯಾಗಿ ಬಳಸಿಕೊಂಡಾಗ ಯಶಸ್ಸು ತನ್ನಿಂದ ತಾನೇ ನಮ್ಮದಾಗುತ್ತದೆಯೆಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಜಯಾನಂದ ಸುವರ್ಣ ಹೇಳಿದರು.
ಮೂಲ್ಕಿಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆಯ ಲೀಲಾವತಿ ಜಯ ಸುವರ್ಣ ತೆರೆದ ಸಭಾಂಗಣದಲ್ಲಿ ಜರಗಿದ ಶಾಲೆಯ ವಿದ್ಯಾರ್ಥಿ ಸಂಸತ್ತಿನ ಪದಗ್ರಹಣ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ಸಂಸ್ಥೆಯ ಸಂಚಾಲಕ ಹರೀಂದ್ರ ಸುವರ್ಣ ವಹಿಸಿದ್ದು ವಿದ್ಯಾರ್ಥಿಗಳು ಶ್ರದ್ಧೆಯಿಂದ ಕಲಿತಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯ .ಶಾಲಾ ಹಂತದಲ್ಲಿಯೇ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಹೇಳಿದರು.ಕಾಲೇಜು ವಿದ್ಯಾರ್ಥಿ ನಾಯಕ ರಿಯಾನ್ ಪ್ರಣಿತ್ , ಪ್ರೌಢಶಾಲಾ ವಿದ್ಯಾರ್ಥಿ ನಾಯಕ ಕಾರ್ತಿಕ್ ಜೊತೆ ಕಾಲೇಜು ಸಂಸತ್ತಿನ ಇತರ ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಿದರು. ಸಂಸ್ಥೆಯ ಕಾರ್ಯದರ್ಶಿ ಬಾಲಚಂದ್ರ ಸನಿಲ್ ಆಡಳಿತ ಮಂಡಳಿಯ ಸದಸ್ಯರಾದ ಯೋಗೀಶ್ ಕೋಟ್ಯಾನ್ ,ಹೇಮರಾಜ್ ಕೆ, ಸಂಸ್ಥೆಯ ಆಡಳಿತಾಧಿಕಾರಿ ಮಂಜುಳಾ, ಪ್ರಾಂಶುಪಾಲರಾದ ಯತೀಶ್ ಅಮೀನ್ ಉಪಸ್ಥಿತರಿದ್ದರು.ಕಾರ್ಯದರ್ಶಿ ಬಾಲಚಂದ್ರ ಸನಿಲ್ ಸ್ವಾಗತಿಸಿದರು, ಪ್ರಾಂಶುಪಾಲ ಯತೀಶ್ ಅಮೀನ್ ವಂದಿಸಿದರು.ಉಪನ್ಯಾಸಕಿಯರಾದ ವನಜ ವಾಸು ಹಾಗೂ ಶ್ವೇತ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಸಂಘದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…