ಕಿನ್ನಿಗೋಳಿ: ರೋಟರಿ ಜಿಲ್ಲೆ 3181 ರ ವಲಯ 1 ರ ನೂತನ ಸಹಾಯಕ ಗವರ್ನರ್ ಆಗಿ ಪತ್ರಕರ್ತ,ರಂಗ ಸಂಘಟಕ ಶರತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಇವರುರಂಗ ನಟ,ಯಕ್ಷಗಾನ ಕಲಾವಿದ.26 ವರ್ಷಗಳಿಂದ ಕಿನ್ನಿಗೋಳಿಯ ವಿಜಯಾ ಕಲಾವಿದರು ನಾಟಕ ಸಂಸ್ಥೆ ಯನ್ನು ಮುನ್ನಡೆಸುತ್ತಿದ್ದು ರಂಗಭೂಮಿ ಸಂಘಟನೆಗೆ 2005 ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ. ಹುಟ್ಟೂರು ಸಂಕಲಕರಿಯ ವಿಜಯಾ ಯುವಕ ಸಂಘ,ಸಂಕಲಕರಿಯ ಹಾಲು ಉತ್ಪಾದಕರ ಸಂಘ,ಮುಲ್ಕಿ ವಲಯ ಪತ್ರಕರ್ತರ ಸಂಘ,ಕಿನ್ನಿಗೋಳಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿ,ಐಕಳ ಪೊಂಪೈ ಕಾಲೇಜು ಹಳೆ ವಿದ್ಯಾರ್ಥಿ ಸಂಘ,ಮುಂಡ್ಕೂರು ವಿದ್ಯಾವರ್ಧಕ ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿ ಸಂಘ,ಶಿರ್ವ ಎಂ.ಎಸ್.ಆರ್.ಎಸ್ ಕಾಲೇಜು ವಿದ್ಯಾರ್ಥಿ ಸಂಘ,ಕಿನ್ನಿಗೋಳಿ ರೋಟರಾಕ್ಟ್ ಗಳಲ್ಲಿ ಅಧ್ಯಕ್ಷನಾಗಿ ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷನಾಗಿ ,ಕಿನ್ನಿಗೋಳಿ ರೋಟರಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. ಧನ್ಯತೆ.ಕಿನ್ನಿಗೋಳಿ ರೋಟರಿಯ ಶತಮಾನೋತ್ಸವ ಸಾಲಿನ ಕಾರ್ಯದರ್ಶಿ, ವಲಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.ಮುಂಡ್ಕೂರುಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪತ್ನಿ ಮಮತಾ ಶೆಟ್ಟಿ ಕಿನ್ನಿಗೋಳಿ ಇನ್ನರ್ವೀಲ್ ನ ಮಾಜಿ ಅಧ್ಯಕ್ಷೆಯಾಗಿದ್ದು ಪುತ್ರಿ ಶಮ ಶೆಟ್ಟಿ ಮಂಗಳೂರಿನ ಎಜೆ ದಂತ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ದಂತ ವೈದ್ಯಕೀಯ ಶಿಕ್ಷಣ ಪಡೆಯುತ್ತಿದ್ದು ಪುತ್ರ ಮನೀಶ್ ಶೆಟ್ಟಿ ಮೂಡಬಿದ್ರೆ ಆಳ್ವಾಸ್ ನಲ್ಲಿ ದ್ವಿತೀಯ ಪಿಯುಸಿಯಲ್ಲಿ ವಿಜ್ಞಾನ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದಾರೆ.ಸದಾ ಸೇವಾನಿರತ ಮನೋಭಾವನೆಳಿಂದ ಮಿತೃತ್ವ-ಭ್ರಾತೃತ್ವಗಳ ಮೂಲಕ ಎಲ್ಲರ ಜತೆ ಬೆರೆತು ಬಾಳುತ್ತಾ ರೋಟರಿಯೇ ನನ್ನ ಉಸಿರು ಎಂಬ ನಿರಂತರ ಉದ್ಘೋಷ ಶರತ್ ಶೆಟ್ಟಿಯವರದಾಗಿದ್ದು ರೋಟರಿ ಜಿಲ್ಲಾ ಗವರ್ನರ್ ರೊವಿಕ್ರಮ್ ದತ್ತ ರವರು ಇವರನ್ನು ವಲಯದ ಸಹಾಯಕ ಗವರ್ನರ್ ಆಗಿ ನಿಯುಕ್ತಿಗೊಳಿಸಿದ್ದಾರೆ.ಇವರು ಕಿನ್ನಿಗೋಳಿ,ಮುಲ್ಕಿ,ಬಜಪೆ ಹಾಗೂ ಮೂಡಬಿದ್ರೆ ಮಿಡ್ ಟೌನ್ ರೋಟರಿ ಸಂಸ್ಥೆಗಳಿಗೆ ಸಹಾಯಕ ಗವರ್ನರ್ ಆಗಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…