ಜನ ಮನದ ನಾಡಿ ಮಿಡಿತ

Advertisement

ಮೂಡುಮಾರ್ನಾಡು ಸ.ಪ್ರೌ.ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ಮೂಡುಬಿದಿರೆ: ತಾಲೂಕಿನ ಮೂಡುಮಾರ್ನಾಡು ಸರಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಸುಮಂತ್ ಎಸ್ ಆಂಧ್ರ ಪ್ರದೇಶದ ಗುಂಟೂರಿನ ಆಚಾರ್ಯ ನಾಗಾರ್ಜುನ ವಿವಿಯಲ್ಲಿ ನಡೆದ ದಕ್ಷಿಣ ಭಾರತ ವಲಯ ಚಾಂಪಿಯನ್ ಶಿಪ್‌ನಲ್ಲಿ 600ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ಹಿಂದೆ ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದರು. ಬೆಂಗಳೂರಿನ ಹೆಚ್‌ಸಿಎಲ್ ಫೌಂಡೇಶನ್ ಈ ಕ್ರೀಡಾಕೂಟಗಳನ್ನು ಆಯೋಜಿಸಿತ್ತು.
ಕೆಲ್ಲಪುತ್ತಿಗೆಯ ಶೇಖರ ಪೂಜಾರಿ ಮತ್ತು ಮೋಹಿನಿಯವರ ಪುತ್ರರಾಗಿದ್ದಾರೆ ಸುಮಂತ್ ಎಸ್.ಅವರು.

ಮೂಡುಮಾರ್ನಾಡು ಶಾಲೆಯ ವಿದ್ಯಾರ್ಥಿಯ ಈ ಸಾಧನೆಗೆ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಭಾಸ್ಕರ ಎಸ್. ಕೋಟ್ಯಾನ್ ಮತ್ತು ಸಮಿತಿಯ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯಿನಿ ಡಾ. ರಾಜಶ್ರೀ ಹಾಗೂ ಅಧ್ಯಾಪಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!