ಜನ ಮನದ ನಾಡಿ ಮಿಡಿತ

Advertisement

ಮಂಗಳೂರು:ರಿಟೈನಿಂಗ್‌ ವಾಲ್‌ ವಿಳಂಬ: ಆತಂಕದಲ್ಲಿ ರಾಮಕೃಷ್ಣ ಶಿಕ್ಷಣ ಸಂಸ್ಥೆ

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ‌್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ.

ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್‌ ವಾಲ್‌ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ‌ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್‌ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್‌ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್‌ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್‌ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್‌ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!