ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು:ರಿಟೈನಿಂಗ್‌ ವಾಲ್‌ ವಿಳಂಬ: ಆತಂಕದಲ್ಲಿ ರಾಮಕೃಷ್ಣ ಶಿಕ್ಷಣ ಸಂಸ್ಥೆ

ಮಂಗಳೂರು: ಬಂಟ್ಸ್ ಹಾಸ್ಟೆಲ್‌ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ‌್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್‌ಗೆ ದೂರು ನೀಡಿದೆ.

ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್‌ ವಾಲ್‌ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ‌ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್‌ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್‌ ವಾಲ್‌ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್‌ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್‌ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್‌ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್‌ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!