ಮಂಗಳೂರು: ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್ಗೆ ದೂರು ನೀಡಿದೆ.
ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್ ವಾಲ್ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…