ಮಂಗಳೂರು: ಬಂಟ್ಸ್ ಹಾಸ್ಟೆಲ್ ಸಮೀಪದಲ್ಲಿರುವ ಶ್ರೀ ರಾಮಕೃಷ್ಣ ಶಿಕ್ಷಣ ಸಂಸ್ಥೆಯ ಕಟ್ಟಡದ ಬಳಿ ಭಂಡಾರಿ ಬಿಲ್ಡರ್ಸ್ ನಿರ್ಮಿಸುತ್ತಿರುವ ಬಹುಮಹಡಿ ಕಟ್ಟಡದಿಂದ ನಮ್ಮ ಸಂಸ್ಥೆಯ ಕಟ್ಟಡಕ್ಕೆ ಆತಂಕ ಎದುರಾಗಿದೆ ಎಂದು ಬಂಟರ ಯಾನೆ ನಾಡವರ ಮಾತೃಸಂಘವು ಜಿಲ್ಲಾಧಿಕಾರಿ ಮತ್ತು ಮೇಯರ್ಗೆ ದೂರು ನೀಡಿದೆ.
ಶತಮಾನದ ಹಿಂದೆಯೇ ಇಲ್ಲಿ ಪ್ರಾಕೃತಿಕವಾಗಿ ನೀರು ಹರಿಯುವ ಸಣ್ಣ ತೋಡಿನ ರೂಪದ ಚರಂಡಿ ಇದ್ದು, ಭಂಡಾರಿ ಬಿಲ್ಡಸ್೯ ಸಂಸ್ಥೆ ನಿರ್ಮಾಣ ಮಾಡುವ ಕಟ್ಟಡದಿಂದ ಚರಂಡಿಗೆ ಹಾನಿಯಾಗಿದೆ. ಅಲ್ಲದೆ ಕಟ್ಟಡಕ್ಕಾಗಿ ತುಂಬಾ ಆಳದಲ್ಲಿ ಭೂಮಿಯನ್ನು ಅಗೆಯಲಾಗಿದ್ದು, ಸುರಕ್ಷೆಗಾಗಿ ನಿರ್ಮಿಸುತ್ತಿರುವ ರಿಟೈನಿಂಗ್ ವಾಲ್ ಕಾಮಗಾರಿ ತುಂಬಾ ನಿಧಾನಗತಿಯಲ್ಲಿದೆ ಎಂದು ಅದರಲ್ಲಿ ಆಪಾದಿಸಲಾಗಿದೆ. ಕೆಲವು ವರ್ಷಗಳ ಹಿಂದೆ ಕಾಮಗಾರಿ ಆರಂಭಿಸುವಾಗ ಭಂಡಾರಿ ಬಿಲ್ಡಸ್೯ ನ ಮುಖ್ಯಸ್ಥರಾದ ಲಕ್ಷ್ಮೀಶ ಭಂಡಾರಿ ಅವರು ಎಲ್ಲ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದಾಗಿಯೂ, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗುವವರೆಗೆ ಪೈಪ್ ಅಳವಡಿಸಿ ನೀರು ಹರಿದು ಹೋಗಲು ವ್ಯವಸ್ಥೆ ಮಾಡುವುದಾಗಿಯೂ ಭರವಸೆ ನೀಡಿದ್ದರು. ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾದ ಬಳಿಕ ಹಿಂದಿದ್ದ ರೀತಿಯಲ್ಲೇ ಚರಂಡಿ ವ್ಯವಸ್ಥೆ ಮಾಡುವುದಾಗಿಯೂ ತಿಳಿಸಿದ್ದರು. ಆದರೆ ಆ ಬಳಿಕ ಅವರು ಮಾತಿಗೆ ಬದ್ಧರಾಗಿರದ ಕಾರಣ ಈಗ ರಾಮಕೃಷ್ಣ ಶಿಕ್ಷಣ ಸಂಸ್ಥೆಗೆ ಅಪಾಯದ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈಗ ಮುಂಗಾರು ಬಿರುಸುಗೊಂಡಿದ್ದು, ರಿಟೈನಿಂಗ್ ವಾಲ್ ಕಾಮಗಾರಿ ಪೂರ್ತಿಯಾಗದ ಕಾರಣ ಮಣ್ಣು ಸಡಿಲಗೊಂಡು ಜರಿದು ಬೀಳುವ ಸಾಧ್ಯತೆಯೂ ಇದೆ. ಒಂದೊಮ್ಮೆ ಹೀಗಾದರೆ ಕಾಲೇಜಿನ ಕಟ್ಟಡ ಹಾಗೂ ಅದರಲ್ಲಿರುವ ಸಾವಿರಾರು ವಿದ್ಯಾರ್ಥಿಗಳ ಜೀವ ಅಪಾಯಕ್ಕೆ ಸಿಲುಕಲಿದೆ. ಆದ್ದರಿಂದ ಕೂಡಲೇ ತಾವು ಮಧ್ಯಪ್ರವೇಶಿಸಿ ಭಂಡಾರಿ ಬಿಲ್ಡರ್ಸ್ ಸಂಸ್ಥೆಯಿಂದ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಮತ್ತು ಮೇಯರ್ ಗೆ ದೂರಿನಲ್ಲಿ ಮನವಿ ಮಾಡಲಾಗಿದೆ.
ಮೇ ತಿಂಗಳ 27ರಂದು ಈ ಸಂಬಂಧ ಭಂಡಾರಿ ಬಿಲ್ಡರ್ಸ್ನ ಮಾಲಕರಾದ ಲಕ್ಷ್ಮೀಶ ಭಂಡಾರಿಗೆ ಈ ಸಂಬಂಧ ನೋಟಿಸ್ ನೀಡಿ, ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು. ಹಿಂದೆ ನೀಡಿದ್ದ ಮಾತು ಉಳಿಸಿಕೊಳ್ಳುವಂತೆ ಕೇಳಿಕೊಳ್ಳಲಾಗಿತ್ತು. ಆದರೆ ಅದಕ್ಕೆ ಯಾವುದೇ ಪೂರಕ ಸ್ಪಂದನೆ ಸಿಗದ ಕಾರಣ ಜೂನ್ 27ರಂದು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಮುಖ್ಯಸ್ಥರಿಗೆ ಬಂಟರ ಸಂಘದ ವತಿಯಿಂದ ದೂರು ನೀಡಲಾಗಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…