ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅಪಾಯದಲ್ಲಿ ಬಳ್ಕುಂಜೆ ಫಲಿಮಾರ್ ಸಂಪರ್ಕ ಸೇತುವೆ -ದುರಸ್ತಿಗೆ ಆಗ್ರಹ

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ- ಫಲಿಮಾರ್ ಸಂಪರ್ಕ ಸೇತುವೆ ಕುಸಿತದ ಭೀತಿಯಲ್ಲಿದ್ದು ಸ್ಥಳೀಯರ ದೂರಿನಂತೆ ಜಿಲ್ಲಾಡಳಿತ ಎಚ್ಚೆತ್ತು ಘನ ವಾಹನ ಸಂಚಾರ ನಿಷೇಧಿಸಲಾಗಿದೆ

ಸೇತುವೆಯ ಅಡಿ ಭಾಗದಲ್ಲಿ ಬೀಮ್ ಗಳ ಸಿಮೆಂಟಿನ ತುಂಡುಗಳು ಬೀಳುತ್ತಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರಧಾನ ಸಂಪರ್ಕಕ್ಕೆ ಈ ಸೇತುವೆ ಕಾರಣವಾಗಿದ್ದು ಸೇತುವೆ ಕುಸಿತಕ್ಕೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಕೂಡ ಕಾರಣವಾಗಿದೆ
ಈ ಭಾಗದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಇಲ್ಲದಿರುವುದು ದಂಧೆ ಕೋರರಿಗೆ ವರದಾನವಾಗಿದೆ.
ಬಳ್ಕುಂಜೆ ಭಾಗದಿಂದ ಫಲಿಮಾರು, ಉಡುಪಿ ಕಾರ್ಕಳ ನಿಟ್ಟೆ, ಬೆಳ್ಮಣ್ ಕುದುರೆಮುಖ ಹೆಬ್ರಿ ಸಾಗರ ಮೊದಲಾದ ಕಡೆಗೆ ಬಹಳ ಹತ್ತಿರದ ರಸ್ತೆಯಾಗಿದ್ದು ಶಾಲಾ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
1979-80ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕ ನಿರ್ಮಾಣಗೊಂಡ ಈ ಸೇತುವೆ ಕಳೆದ 41 ವರ್ಷಗಳಿಂದ ಈ ಸೇತುವೆ ನಿರ್ವಹಣೆಯಾಗಿಲ್ಲ ,ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಭಾರವಾದ ವಾಹನಗಳು ಸಂಚರಿಸುವಾಗ ಭಾರಿ ಗಾತ್ರದ ಶಬ್ದ ಕೇಳಿ ಬರುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಜಿಲ್ಲಾಡಳಿತದಿಂದ ಘನವಾಹನ ಸಂಚಾರ ನಿಷೇಧದ ಬಗ್ಗೆ ಪ್ರಕಟಣೆ ನೀಡಿ ಸ್ಥಳದಲ್ಲಿ ನಾಮ ಫಲಕ ಅಳವಡಿಸಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸೇತುವೆ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅಮರ್ ಕರ್ನೀರೆ ಒತ್ತಾಯಿಸಿದ್ದಾರೆ
ವರದಿ : ಗಣೇಶ್ ಪಂಜ ಅಭಿಮತ ಟಿವಿ ಮೂಲ್ಕಿ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!