ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಅಪಾಯದಲ್ಲಿ ಬಳ್ಕುಂಜೆ ಫಲಿಮಾರ್ ಸಂಪರ್ಕ ಸೇತುವೆ -ದುರಸ್ತಿಗೆ ಆಗ್ರಹ

ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ- ಫಲಿಮಾರ್ ಸಂಪರ್ಕ ಸೇತುವೆ ಕುಸಿತದ ಭೀತಿಯಲ್ಲಿದ್ದು ಸ್ಥಳೀಯರ ದೂರಿನಂತೆ ಜಿಲ್ಲಾಡಳಿತ ಎಚ್ಚೆತ್ತು ಘನ ವಾಹನ ಸಂಚಾರ ನಿಷೇಧಿಸಲಾಗಿದೆ

ಸೇತುವೆಯ ಅಡಿ ಭಾಗದಲ್ಲಿ ಬೀಮ್ ಗಳ ಸಿಮೆಂಟಿನ ತುಂಡುಗಳು ಬೀಳುತ್ತಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರಧಾನ ಸಂಪರ್ಕಕ್ಕೆ ಈ ಸೇತುವೆ ಕಾರಣವಾಗಿದ್ದು ಸೇತುವೆ ಕುಸಿತಕ್ಕೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಕೂಡ ಕಾರಣವಾಗಿದೆ
ಈ ಭಾಗದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಇಲ್ಲದಿರುವುದು ದಂಧೆ ಕೋರರಿಗೆ ವರದಾನವಾಗಿದೆ.
ಬಳ್ಕುಂಜೆ ಭಾಗದಿಂದ ಫಲಿಮಾರು, ಉಡುಪಿ ಕಾರ್ಕಳ ನಿಟ್ಟೆ, ಬೆಳ್ಮಣ್ ಕುದುರೆಮುಖ ಹೆಬ್ರಿ ಸಾಗರ ಮೊದಲಾದ ಕಡೆಗೆ ಬಹಳ ಹತ್ತಿರದ ರಸ್ತೆಯಾಗಿದ್ದು ಶಾಲಾ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
1979-80ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕ ನಿರ್ಮಾಣಗೊಂಡ ಈ ಸೇತುವೆ ಕಳೆದ 41 ವರ್ಷಗಳಿಂದ ಈ ಸೇತುವೆ ನಿರ್ವಹಣೆಯಾಗಿಲ್ಲ ,ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಭಾರವಾದ ವಾಹನಗಳು ಸಂಚರಿಸುವಾಗ ಭಾರಿ ಗಾತ್ರದ ಶಬ್ದ ಕೇಳಿ ಬರುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಜಿಲ್ಲಾಡಳಿತದಿಂದ ಘನವಾಹನ ಸಂಚಾರ ನಿಷೇಧದ ಬಗ್ಗೆ ಪ್ರಕಟಣೆ ನೀಡಿ ಸ್ಥಳದಲ್ಲಿ ನಾಮ ಫಲಕ ಅಳವಡಿಸಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸೇತುವೆ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅಮರ್ ಕರ್ನೀರೆ ಒತ್ತಾಯಿಸಿದ್ದಾರೆ
ವರದಿ : ಗಣೇಶ್ ಪಂಜ ಅಭಿಮತ ಟಿವಿ ಮೂಲ್ಕಿ

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!