ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ- ಫಲಿಮಾರ್ ಸಂಪರ್ಕ ಸೇತುವೆ ಕುಸಿತದ ಭೀತಿಯಲ್ಲಿದ್ದು ಸ್ಥಳೀಯರ ದೂರಿನಂತೆ ಜಿಲ್ಲಾಡಳಿತ ಎಚ್ಚೆತ್ತು ಘನ ವಾಹನ ಸಂಚಾರ ನಿಷೇಧಿಸಲಾಗಿದೆ
ಸೇತುವೆಯ ಅಡಿ ಭಾಗದಲ್ಲಿ ಬೀಮ್ ಗಳ ಸಿಮೆಂಟಿನ ತುಂಡುಗಳು ಬೀಳುತ್ತಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರಧಾನ ಸಂಪರ್ಕಕ್ಕೆ ಈ ಸೇತುವೆ ಕಾರಣವಾಗಿದ್ದು ಸೇತುವೆ ಕುಸಿತಕ್ಕೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಕೂಡ ಕಾರಣವಾಗಿದೆ
ಈ ಭಾಗದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಇಲ್ಲದಿರುವುದು ದಂಧೆ ಕೋರರಿಗೆ ವರದಾನವಾಗಿದೆ.
ಬಳ್ಕುಂಜೆ ಭಾಗದಿಂದ ಫಲಿಮಾರು, ಉಡುಪಿ ಕಾರ್ಕಳ ನಿಟ್ಟೆ, ಬೆಳ್ಮಣ್ ಕುದುರೆಮುಖ ಹೆಬ್ರಿ ಸಾಗರ ಮೊದಲಾದ ಕಡೆಗೆ ಬಹಳ ಹತ್ತಿರದ ರಸ್ತೆಯಾಗಿದ್ದು ಶಾಲಾ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
1979-80ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕ ನಿರ್ಮಾಣಗೊಂಡ ಈ ಸೇತುವೆ ಕಳೆದ 41 ವರ್ಷಗಳಿಂದ ಈ ಸೇತುವೆ ನಿರ್ವಹಣೆಯಾಗಿಲ್ಲ ,ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಭಾರವಾದ ವಾಹನಗಳು ಸಂಚರಿಸುವಾಗ ಭಾರಿ ಗಾತ್ರದ ಶಬ್ದ ಕೇಳಿ ಬರುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಜಿಲ್ಲಾಡಳಿತದಿಂದ ಘನವಾಹನ ಸಂಚಾರ ನಿಷೇಧದ ಬಗ್ಗೆ ಪ್ರಕಟಣೆ ನೀಡಿ ಸ್ಥಳದಲ್ಲಿ ನಾಮ ಫಲಕ ಅಳವಡಿಸಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸೇತುವೆ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅಮರ್ ಕರ್ನೀರೆ ಒತ್ತಾಯಿಸಿದ್ದಾರೆ
ವರದಿ : ಗಣೇಶ್ ಪಂಜ ಅಭಿಮತ ಟಿವಿ ಮೂಲ್ಕಿ
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…