ಮುಲ್ಕಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯನ್ನು ಸಂಪರ್ಕಿಸುವ ಮುಲ್ಕಿ ಸಮೀಪದ ಬಳ್ಕುಂಜೆ- ಫಲಿಮಾರ್ ಸಂಪರ್ಕ ಸೇತುವೆ ಕುಸಿತದ ಭೀತಿಯಲ್ಲಿದ್ದು ಸ್ಥಳೀಯರ ದೂರಿನಂತೆ ಜಿಲ್ಲಾಡಳಿತ ಎಚ್ಚೆತ್ತು ಘನ ವಾಹನ ಸಂಚಾರ ನಿಷೇಧಿಸಲಾಗಿದೆ
ಸೇತುವೆಯ ಅಡಿ ಭಾಗದಲ್ಲಿ ಬೀಮ್ ಗಳ ಸಿಮೆಂಟಿನ ತುಂಡುಗಳು ಬೀಳುತ್ತಿದ್ದು ಕಬ್ಬಿಣದ ಸರಳುಗಳು ಕಾಣುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಪ್ರಧಾನ ಸಂಪರ್ಕಕ್ಕೆ ಈ ಸೇತುವೆ ಕಾರಣವಾಗಿದ್ದು ಸೇತುವೆ ಕುಸಿತಕ್ಕೆ ಎಗ್ಗಿಲ್ಲದೆ ಅಕ್ರಮ ಮರಳು ಸಾಗಾಟ ಕೂಡ ಕಾರಣವಾಗಿದೆ
ಈ ಭಾಗದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಇಲ್ಲದಿರುವುದು ದಂಧೆ ಕೋರರಿಗೆ ವರದಾನವಾಗಿದೆ.
ಬಳ್ಕುಂಜೆ ಭಾಗದಿಂದ ಫಲಿಮಾರು, ಉಡುಪಿ ಕಾರ್ಕಳ ನಿಟ್ಟೆ, ಬೆಳ್ಮಣ್ ಕುದುರೆಮುಖ ಹೆಬ್ರಿ ಸಾಗರ ಮೊದಲಾದ ಕಡೆಗೆ ಬಹಳ ಹತ್ತಿರದ ರಸ್ತೆಯಾಗಿದ್ದು ಶಾಲಾ ಮಕ್ಕಳು ಕೂಡ ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
1979-80ರಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕ ನಿರ್ಮಾಣಗೊಂಡ ಈ ಸೇತುವೆ ಕಳೆದ 41 ವರ್ಷಗಳಿಂದ ಈ ಸೇತುವೆ ನಿರ್ವಹಣೆಯಾಗಿಲ್ಲ ,ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೇತುವೆಯಲ್ಲಿ ಭಾರವಾದ ವಾಹನಗಳು ಸಂಚರಿಸುವಾಗ ಭಾರಿ ಗಾತ್ರದ ಶಬ್ದ ಕೇಳಿ ಬರುತ್ತಿದ್ದು ಸ್ಥಳೀಯರು ಭಯಭೀತರಾಗಿದ್ದಾರೆ.
ಈ ಬಗ್ಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಜಿಲ್ಲಾಡಳಿತದಿಂದ ಘನವಾಹನ ಸಂಚಾರ ನಿಷೇಧದ ಬಗ್ಗೆ ಪ್ರಕಟಣೆ ನೀಡಿ ಸ್ಥಳದಲ್ಲಿ ನಾಮ ಫಲಕ ಅಳವಡಿಸಿದ್ದರೂ ಇದುವರೆಗೂ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕೂಡಲೇ ಜಿಲ್ಲಾಡಳಿತ ಎಚ್ಚೆತ್ತು ಸೇತುವೆ ದುರಸ್ತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರಾದ ಅಮರ್ ಕರ್ನೀರೆ ಒತ್ತಾಯಿಸಿದ್ದಾರೆ
ವರದಿ : ಗಣೇಶ್ ಪಂಜ ಅಭಿಮತ ಟಿವಿ ಮೂಲ್ಕಿ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…