ಸ್ನೇಹಿತರ ಜೊತೆ ನೇತ್ರಾವತಿ ನದಿಗೆ ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬರು ನದಿಗೆ ಬಿದ್ದು ನೀರುಪಾಲಾದ ಘಟನೆ ನಡೆದಿದೆ. ಸುರತ್ಕಲ್ನಿಂದ ಸರಪಾಡಿ ಸಮೀಪದ ಮಾವಿನ ಕಟ್ಟೆ ಎಂಬಲ್ಲಿಯ ನೆಂಟರ ಮನೆಗೆ ಬಂದ ವ್ಯಕ್ತಿಗಳು ಸೇರಿದಂತೆ ನಾಲ್ಕು ಮಂದಿ ಗಾಳ ಹಾಕಿ ಮೀನು ಹಿಡಿಯಲು ಅಜಿಲಮೊಗರು ಸಮೀಪದ ಕೂಟೇಲು ಸೇತುವೆಯ ಸಮೀಪದ ಕಿಂಡಿ ಅಣೆಕಟ್ಟು ಬಳಿ ಬಂದಿದ್ದಾರೆ. ಮೀನು ಹಿಡಿಯುತ್ತಿರುವ ವೇಳೆ ಮೈಕಲ್ ಎಂಬವರು ಆಯ ತಪ್ಪಿ ನೇತ್ರಾವತಿ ನದಿಗೆ ಬಿದ್ದು ನಾಪತ್ತೆಯಾಗಿದ್ರು.
ಭಾರೀ ಮಳೆಯಿಂದ ನದಿ ಉಕ್ಕಿ ಹರಿಯುತಿದ್ದು, ದೋಣಿಯ ಮೂಲಕ ಹುಡುಕಾಟ ನಡೆಸಿದರೂ ಪ್ರಯೋಜನವಾಗಿರಲಿಲ್ಲ. ಇದೀಗ ಬಂಟ್ವಾಳ ಅಗ್ನಿಶಾಮಕ ದಳದವರು ತೀವ್ರ ಹುಡುಕಾಟ ನಡೆಸಿದ ಬಳಿಕ ಮೃತದೇಹ ಪತ್ತೆಯಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಬಂಟ್ವಾಳ ಪೆರುವಾಯಿ ನಿವಾಸಿ ಅಬ್ಬಾಸ್ ಎಂಬಾತನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಎ.16ರಂದು ಅಬ್ಬಾಸ್…
ಖಾಸಗಿ ಎಕ್ಸ್ಪ್ರೆಸ್ ಬಸ್ ಮತ್ತು ಆಟೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋರಿಕ್ಷಾ ಚಾಲಕ ಸೇರಿದಂತೆ ಮೂವರು ಗಾಯಗೊಂಡ…
ಹಣ ಮತ್ತು ಚಿನ್ನಾಭರಣಕ್ಕಾಗಿ ತನ್ನದೇ ಚಿಕ್ಕಮ್ಮನನ್ನು ಕೊಲೆ ಮಾಡಿ, ಶವ ಸುಟ್ಟು ಹಾಕಿದ್ದ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದ್ದು,…
ಸ್ನೇಹಿತರೊಂದಿಗೆ ಪಾರ್ಟಿಗೆ ತೆರಳಿದ್ದ ಯುವತಿಯೊಬ್ಬಳು ಮರುದಿನ ಲಾಡ್ಜ್ ವೊಂದರಲ್ಲಿ ಶ*ವವಾಗಿ ಪತ್ತೆಯಾಗಿರುವ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ…
ದಕ್ಷಿಣ ಕನ್ನಡ ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ವತಿಯಿಂದ ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ…
ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಶಾಲೆಯ ಮುಂಭಾಗದಲ್ಲಿ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದನ್ನು ಶಕ್ತಿ ವಿದ್ಯಾಸಂಸ್ಥೆಯ ಸಿಬ್ಬಂದಿಗಳು…