ಮುಲ್ಕಿ: ರಾಮಕೃಷ್ಣ ಪೂಂಜ ಚಾರಿ ಟೇಬಲ್ ಟ್ರಸ್ಟ್ ವತಿಯಿಂದ ,ಟ್ರಸ್ಟಿ ಭಾಸ್ಕರ್ ಪೂಂಜಾ ಸಹಕಾರದೊಂದಿಗೆ ಮುಲ್ಕಿ ತಾಲ್ಲೂಕು ವ್ಯಾಪ್ತಿಯ ಬಡ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಮುಲ್ಕಿಯ ಕಾರ್ನಾಡ್ ಪೂಂಜಾ ವಿಲ್ಲಾ ದಲ್ಲಿ ಶುಕ್ರವಾರ ನಡೆಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ಮಕ್ಕಳು ಜವಾಬ್ದಾರಿ ಅರಿತುಕೊಂಡು ವಿದ್ಯಾರ್ಥಿ ವೇತನ ಮುಖಾಂತರ ಸಂಸ್ಕಾರಯುತ ಶಿಕ್ಷಣ ಪಡೆದು ಇತರ ಮಕ್ಕಳಿಗೆ ಪ್ರೇರಣೆಯಾಗಬೇಕು ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೂಂಜ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಉದ್ಯಮಿ ಅರವಿಂದ ಪೂಂಜಾ ವಹಿಸಿದ್ದರು
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪೂಂಜಾ ಚಾರಿಟೇಬಲ್ ಟ್ರಸ್ಟಿಗಳಾದ ಗಳಾದ ಅಶ್ವಿನಿ ಪೂಂಜ, ಆದಿತ್ಯ ಪೂಂಜಾ, ಅಪೂರ್ವ ಪೂಂಜಾ , ಹಾಗೂ ಪೂಂಜಾ ಚಾರಿಟಬಲ್ ಟ್ರಸ್ಟ್ ನ ನಿರ್ದೇಶಕರು ಉಪಸ್ಥಿತರಿದ್ದರು. ನಿವೃತ್ತ ಉಪನ್ಯಾಸಕ ವೈ ಎನ್ ಸಾಲ್ಯಾನ್, ಪ್ರಬಂಧಕ ಚಂದ್ರಹಾಸ ಶೆಟ್ಟಿ ನಿರೂಪಿಸಿದರು
ಬಳಿಕ ಸುಮಾರು 6 ಲಕ್ಷ ವೆಚ್ಚದಲ್ಲಿ ಮುಲ್ಕಿ ತಾಲೂಕು ವ್ಯಾಪ್ತಿಯ ಸುಮಾರು 160 ಮಂದಿ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ನಡೆಯಿತು
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…