ಇತರೆ

ಕಡಬ ಜನತಾ ದರ್ಶನ : ಪ್ರಚಾರಕ್ಕೆ ಸೀಮಿತವಾಗಬಾರದು; ಅಧಿಕಾರಿಗಳು ಬದ್ಧತೆಯಿಂದ ಜನರ ಸಮಸ್ಯೆ ಪರಿಹರಿಸಬೇಕು: ಸಚಿವ ಗುಂಡೂ ರಾವ್ ತಾಕೀತು

ಜನತಾ ದರ್ಶನ ಕಾರ್ಯಕ್ರಮ ಪ್ರಚಾರಕ್ಕೆ ಸೀಮಿತವಾಗದೆ ಜನರ ಸಮಸ್ಯೆಗೆ ತಾರ್ಕಿಕ ಪರಿಹಾರ ದೊರೆಯುವ ವೇದಿಕೆಯಾಗಬೇಕು, ಈ ನಿಟ್ಟಿನಲಿ ಅಧಿಕಾರಿಗಳು ಬದ್ಧತೆಯಿಂದ ಕೆಲಸ ನಿರ್ವಹಿಸಬೇಕು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಶನಿವಾರ ಸಂಜೆ ಕಡಬ ಸೈಂಟ್‌ಜೋಕಿಮ್ಸ್ ಸಭಾಭವನದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸರಕಾರ ಯಾವತ್ತೂ ಜನರ ಸೇವೆಗಾಗಿ ಇರುವಂತಾದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಜನರ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸಿದಾಗ ಸರಕಾರದ ಆಶೋತ್ತರಗಳು ಈಡೇರುತ್ತವೆ, ಜನರು ಸಮಸ್ಯೆಗಳನ್ನು ಹೇಳಿಕೊಂಡು ಬಂದಾಗ ಅವರಲ್ಲಿ ದುವರ್ತನೆ ತೋರದೆ ತಾಳ್ಮೆಯಿಂದ ವರ್ತಿಸಿ ಮಾನವೀಯತೆ ಮೆರೆಯಬೇಕು, ಎಲ್ಲಾ ಸಮಸ್ಯೆಗಳನ್ನು ಏಕ ಕಾಲದಲ್ಲಿ ಪರಿಹರಿಸಲು ಸಾಧ್ಯವಿಲ್ಲ. ಆದರೆ ಕಾನೂನು ಚೌಕಟ್ಟಿನ ಒಳಗೆ ಪರಿಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರ ಇಲೇವಾರಿ ಮಾಡಬೇಕೆಂದು ಪರೋಕ್ಷವಾಗಿ ಅಧಿಕಾರಿಗಳಿಗೆ ಭ್ರಷ್ಟಚಾರವಿಲ್ಲದೆ ಕೆಲಸ ನಿರ್ವಹಿಸಿ ಎಂದು ಹೇಳಿದರು.


ಕಡಬ, ಬೆಳ್ತಂಗಡಿ, ಪುತ್ತೂರು , ಸುಳ್ಯ ತಾಲೂಕುಗಳಲ್ಲಿ ಭಾಗಶ: ಅರಣ್ಯ ಸಮಸ್ಯೆ ಇರುವುದರ ಬಗ್ಗೆ ದೂರಗಳು ಬಂದಿವೆ, ಈ ಬಗ್ಗೆ ಗಮನ ಹರಿಸಲಾಗುವುದು, ಪ್ಲಾಟಿಂಗ್ ಸಮಸ್ಯೆ, ೯/೧೧ ವಿನ್ಯಾಸ ನಕ್ಷೆ ಸಮಸ್ಯೆಗಳನ್ನು ಸರಕಾರದ ಮಟ್ಟದಲ್ಲಿ ಸಂಬoಧಪಟ್ಟ ಸಚಿವರೊಂದಿಗೆ ಚರ್ಚಿಸಿ ಪರಿಹರಿಸಲು ಕ್ರಮ ಕೈಗೊಳ್ಲಲಾಗುವುದು ಎಂದು ಸಚಿವರ ಭರವಸೆ ನೀಡಿದರು.
ವೇದಿಕೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಜಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ|ಆನಂದ್ ಕೆ, ಪುತ್ತೂರು ಸಹಾಯಕ ಆಯುಕ್ತ ಜುಬಿನ್ ಮೊಹಾಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಶ್ರವಣ್ ಕುಮಾರ್ , ಐಎಫ್ ಎಸ್ ಅಧಿಕಾರಿ ಅಕ್ಷಯ್, ಮಂಗಳೂರು ಉಪರಣ್ಯ ಸಂರಕ್ಷಣಾಧಿಕಾರಿ ಅಂತೋನಿ ಎಸ್ ಮರಿಯಪ್ಪ, ಡಿವೈಎಸ್‌ಪಿ ವಿಜಯ ಪ್ರಸಾದ್, ಕಡಬ ತಾ.ಪಂ ಅಡಳಿತಾಧಿಕಾರಿ ಕೆಂಪೇ ಗೌಡ, ಕಡಬ ತಹಸಿಲ್ದಾರ್ ಪ್ರಭಾಕರ ಖಜೂರೆ, ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಕಾರ್ಪೋರೇಟರ್ ಎ.ಸಿ. ವಿನಯರಾಜ್ ಉಪಸ್ಥಿತರಿದ್ದರು.
ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಸ್ವಾಗತಿಸಿದರು, ಕಡಬ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ವಂದಿಸಿದರು. ಶಿಕ್ಷಕ ಪ್ರಶಾಂತ್ ಅನಂತಾಡಿ ನಿರೂಪಿಸಿದರು.

ಸಭೆಯ ಮಧ್ಯೆ ಬಂದು ಸಮಸ್ಯೆ ಪರಿಹರಿಸಿದ ಸಚಿವರು:
ವಿಕಲಾಂಗ ಚೇತನಾ ವ್ಯಕ್ತಿ ಚಾರ್ವಾಕ ಗ್ರಾಮದ ಬೀರೋಳಿಕೆ ನಿವಾಸಿ ಯತೀಂದ್ರ ಅವರು ಸಮಸ್ಯೆ ಪರಿಹರಿಸಿಕೊಳ್ಳಲು ಸಭೆ ಬಂದಿದ್ದರು. ಸಭೆಯ ಮಧ್ಯೆ ಇರುವುದನ್ನು ಗಮನಿಸಿದ ಸಚಿವರು ಸ್ಥಳಕ್ಕೆ ತೆರಳಿ ಸಮಸ್ಯೆ ಆಲಿಸಿದರು. ತನಗೆ ಮಾಶಾಸನ, ಸಿಗುತ್ತಿಲ್ಲ, ವೀಲ್ ಚೇರ್ ನೀಡಿಲ್ಲ ಮುಂತಾದ ಸಮಸ್ಯೆಗಳನ್ನು ಹೇಳಿಕೊಂಡಾಗ ಸಂಬoಧಪಟ್ಟ ಇಲಾಖಾಧಿಕಾರಿಗಳನ್ನು ಕರೆದು ಯತೀಂದ್ರವ ಅವರ ಸಮಸ್ಯೆ ಪರಿಹರಿಸುವಂತೆ ಆದೇಶ ಮಾಡಿ ಸ್ಥಳದಲ್ಲಿ ಪರಿಹಾರ ನೀಡಿದರು.
ಮತ್ತೋರ್ವ ವಿಕಲಾಂಗಚೇತನ ಗಿರೀಶ್ ಕಾಯಂದೂರು ಕಟ್ಟಡ ಕಾರ್ಮಿಕನಾಗಿ ದುಡಿಯುತ್ತಿದ್ದ ವೇಳೆ ಕಟ್ಟಡದಿಂದ ಬಿದ್ದು ತನ್ನ ದೇಹದ ಸ್ವಾಧೀನ ಕಳೆದುಕೊಂಡರೂ ತನಗೆ ಯಾವುದೇ ಪರಿಹಾರವಾಗಲೀ, ಮಾಶಾಸನವಾಗಲಿ ನೀಡಲು ಅಧಿಕರಿಗಳು ಸತಾಯಿಸುತ್ತಾರೆ ಎಂದು ತನ್ನ ಅಳಲು ತೋಡಿಕೊಂಡರು. ವೇದಿಕೆಯಿಂದ ಮುಂಭಾಗಕ್ಕೆ ಬಂದು ಸಮಸ್ಯೆ ಆಲಿಸಿದ ಸಚಿವರು ಸಂಬoಧಪಟ್ಟ ಇಲಾಖೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ವಿವಿಧ ಸಮಸ್ಯೆಗಳ ಬಗ್ಗೆ ಮನವಿ:
ಕಡಬ ತಾಲೂಕು ಕೇಂದ್ರವದರೂ ಇಲ್ಲಿ ವಿವಿಧ ಇಲಾಖೆಗಳು ಇನ್ನೂ ಕಾರ್ಯಚರಿಸುತ್ತಿಲ್ಲ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಸಬ್‌ರಿಜಿಸ್ಟಾçರ್ ಕಛೇರಿ, ಸಮಾಜ ಕಲ್ಯಾಣ ಕಛೇರಿ, ತೋಟಗಾರಿಕಾ ಇಲಾಖೆ, ಸಾರ್ವಜನಿಕ ಬಸ್ ನಿಲ್ದಾಣ, ಲೋಕೋಪಯೋಗಿ ಇಲಾಖೆಗಳನ್ನು ಶೀಘ್ರ ತೆರೆಯಬೇಕು, ಇಂದಿರಾ ಕ್ಯಾಂಟೀನ್ ಶೀಘ್ರ ತೆರೆಯಬೇಕು, ಪಾಲೋಲಿ ಸೇತುವೆಯನ್ನು ಶೀಘ್ರ ಲೋಕಾರ್ಪಣೆ ಮಾಡಬೇಕು, ಕಡಬದಲ್ಲಿರುವ ಅಲ್ಪ ಸಂಖ್ಯಾತರ ಮಹಿಳಾ ಹಾಸ್ಟೆಲ್‌ನ್ನು ಮರು ಪ್ರಾರಂಭ ಮಾಡಬೇಕು ಎಂದು ಜಿಲ್ಲಾ ಪರಿಷತ್ ಮಾಜಿ ಸದಸ್ಯ ಮೀರಾ ಸಾಹೇಬ್ ಮನವಿ ಸಲ್ಲಿಸಿದರು. ಕಡಬದಲ್ಲಿ ನ್ಯಾಯಾಲಯ ಪ್ರಾರಂಭಿಸಬೇಕೆAದು ಕಡಬದ ನ್ಯಾಯವಾದಿಗಳು ಮನವಿ ಸಲ್ಲಿಸಿದರು. ಆಲಂಕಾರಿನಲ್ಲಿ ಎಂಡೋ ಸಂತ್ರಸ್ತರ ಶಾಶ್ವತ ಪುನರ್ವಸತಿ ಕೇಂದ್ರ ಪ್ರಾರಂಭಿಸಬೇಕು ಎಂದು ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಪೀರ್‌ಮಹಮ್ಮದ್ ಸಾಹೇಬ್ ಮನವಿ ಸಲ್ಲಿಸಿದರು. ಪ್ಲಾಟಿಂಗ್ ಸಮಸ್ಯೆ ಪರಿಹರಿಸುವಂತೆ ಕಾಂಗ್ರೇಸ್ ಮುಖಂಡ ರಾಯ್ ಅಬ್ರಹಾಂ ಮನವಿ ಮಾಡಿದರು. ಕೆ.ಪಿ.ಮೋಹನ್ ಸೇರದಿಂತೆ ಹಲವರು ವಿವಿಧ ಸಮಸ್ಯೆಗಳ ಬಗ್ಗೆ ಸಚಿವರ ಗಮನ ಸೆಳೆದರು. ೨೫೦ ಕ್ಕೂ ಹೆಚ್ಚು ಅರ್ಜಿಗಳನ್ನು ಸಚಿವರಿಗೆ ಸಲ್ಲಿಸಲಾಯಿತು. ಮನವಿಯ ಪಟ್ಟಿಯನ್ನು ಉಪತಹಸೀಲ್ದಾರ್ ಮನೋಹರ ಕೆ.ಟಿ ಹಾಗೂ ಲೋಕೋಪಯೋಗಿ ಸಹಾಯಕ ಇಂಜಿನಿಯರ್ ಪ್ರಮೋದ್ ಕುಮಾರ್ ಕೆ.ಕೆ ವಾಚಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

17 hours ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

18 hours ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

18 hours ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

18 hours ago

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…

18 hours ago

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…

18 hours ago