ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪೆರ್ನೆ ವಲಯ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ತಂಡ ಪೆರ್ನೆ ವಲಯದ ವತಿಯಿಂದ ಬಿಳಿಯೂರು ಮಾಡತ್ತಾರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯ ಅಂಗವಾಗಿ ಮಾಹಿತಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ ಮಾತನಾಡಿ ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ತಿಳಿಸಿದರು. ಹದಿಹರೆಯದಲ್ಲಿ ವಿದ್ಯಾರ್ಥಿಗಳು ಕೆಟ್ಟ ಅಭ್ಯಾಸಗಳಿಗೆ ಬಲಿಯಾಗದಂತೆ ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು ಎಂದರು.
ಸಾಮಾಜಿಕ ಕಾರ್ಯಕರ್ತ ಉಮನಾಥ ಶೆಟ್ಟಿ ಪೆರ್ನೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಯೋಜನೆಯ ಕರ್ವೇಲು ಒಕ್ಕೂಟದ ಅಧ್ಯಕ್ಷ ಮಹೇಶ್ ಪಡಿವಾಳ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಪೆರ್ನೆ ಗ್ರಾ.ಪಂ ಸದಸ್ಯ ತನಿಯಪ್ಪ ಪೂಜಾರಿ , ನವೀನ್ ಕುಮಾರ್ ಪದಬರಿ , ವಲಯ ಮೇಲ್ವಿಚಾರಕಿ ಶಾರದಾ ಸ್ವಾಗತಿಸಿ ಪ್ರಸ್ತಾವನೆ ಗೈದರು. ಸೇವಾ ಪ್ರತಿನಿಧಿ ಹಸ್ಮಿತಾ ವಂದಿಸಿದರು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…