ಉಳ್ಳಾಲ: ಉಳ್ಳಾಲ ಖಾಝಿ ಆಗಿ ಸೇವೆಯಲ್ಲಿದ್ದ ಫಝಲ್ ಕೋಯಮ್ಮ ತಂಙಳ್ (65) ಎಟ್ಟಿಕುಳದಲ್ಲಿ ವಿಧಿವಶರಾದರು.
ಅವರ ತಂದೆ ಮರ್ಹೂಂ ತಾಜುಲ್ ಉಲಮಾ ಅವರು ಉಳ್ಳಾಲ ಖಾಝಿ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ಆ ಗಿದ್ದ ಸಂದರ್ಭದಲ್ಲಿ ಸಹಾಯಕ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.2014ರಲ್ಲಿ ತಾಜುಲ್ ಉಲಮಾ ಸಯ್ಯದ್ ಅಬ್ದುಲ್ ರಹಿಮಾನ್ ಕುಂಞಿ ಕೋಯ ತಂಙಳ್ ನಿಧನ ಹೊಂದಿದ್ದು, ಇದರ ಬಳಿಕ ಫಝಲ್ ಕೋಯಮ್ಮ ತಂಙಳ್ ಖಾಝಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಕೆಲವು ವರ್ಷಗಳಿಂದ ಪುತ್ತೂರು ತಾಲೂಕಿನ ಕೂರ ಎಂಬಲ್ಲಿ ಫಝಲ್ ಎಜುಕೇಶನಲ್ ಸೆಂಟರ್ ಸಂಸ್ಥೆ ನಡಸುತ್ತಿದ್ದರು. ಅವರ ಆರೋಗ್ಯದಲ್ಲಿ ಏರು ಪೇರು ಕಂಡು ಕೇರಳದ ಆಸ್ಪತ್ರೆಗೆ ದಾಖಲಾಗಿದ್ದು, ಸೋಮವಾರ ಬೆಳಗ್ಗೆ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರ ಮೃತದೇಹ ಇಂದು ರಾತ್ರಿ 9 ಗಂಟೆಗೆ ಪುತ್ತೂರು ತಾಲೂಕಿನ ಕೂರದಲ್ಲಿ ಅಂತಿಮ ದರ್ಶನ ಹಾಗೂ ದಫನ ಕಾರ್ಯ ನಡೆಯಲಿದೆ.
ಅವರ ನಿಧನಕ್ಕೆ ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝೀಮ್ ಮುಕಚೇರಿ ಉಪಾಧ್ಯಕ್ಷ ಅಶ್ರಫ್ ರೈ ಟ್ ವೆ, ಹಸೈನಾರ್, ಕಾರ್ಯದರ್ಶಿ ಮುಸ್ತಫಾ ಮದನಿ,ನಗರ ಸಹಿತ ಸಮಿತಿ ಸದಸ್ಯರು , ಮಾಜಿ ಅಧ್ಯಕ್ಷ ರಶೀದ್ ಹಾಜಿ, ಅಬ್ದುಲ್ ರಶೀದ್ ಝೈನಿ ಸಂತಾಪ ಸೂಚಿಸಿದ್ದಾರೆ
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…