ಜನ ಮನದ ನಾಡಿ ಮಿಡಿತ

Advertisement

ಇಂದಿನಿಂದ 4 ದಿನ ರಾಜ್ಯಾಧ್ಯಂತ ‘ಭಾರೀ ಮಳೆ’ – ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಳೆ ಆರಂಭದ ನಂತರ, ರಾಜ್ಯದ ನಾನಾ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿದೆ. ಇನ್ನೂ ಕೆಲವು ಕಡೆಗಳಲ್ಲಿ ಭೂಮಿ ಹದಗೊಳ್ಳುವಷ್ಟು ಮಳೆಯಾಗದೇ, ಭಿತ್ತನೆಗಾಗಿ ರೈತರು ಮಳೆರಾಯನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇಂದಿನಿಂದ ರಾಜ್ಯಾಧ್ಯಂತ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ.9ರ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಹಳದಿ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಕೆಲವೆಡೆ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಅಂದಹಾಗೇ ರಾಜ್ಯಾಧ್ಯಂತ ಮುಂಗಾರು ಮಳೆಯ ಆರ್ಭಟಕ್ಕೆ ಈವರೆಗೆ 21 ಮಂದಿ ಬಲಿಯಾಗಿದ್ದರೇ, 40ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದ್ದಾವೆ ಎಂಬುದಾಗಿ ನಿನ್ನೆಯಷ್ಟೇ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!