ಜನ ಮನದ ನಾಡಿ ಮಿಡಿತ

Advertisement

ಇಂದಿನಿಂದ 4 ದಿನ ರಾಜ್ಯಾಧ್ಯಂತ ‘ಭಾರೀ ಮಳೆ’ – ‘ಹವಾಮಾನ ಇಲಾಖೆ’ ಮುನ್ಸೂಚನೆ

ಬೆಂಗಳೂರು: ಮುಂಗಾರು ಮಳೆ ಆರಂಭದ ನಂತರ, ರಾಜ್ಯದ ನಾನಾ ಭಾಗಗಳಲ್ಲಿ ಎಡಬಿಡದೆ ಸುರಿಯುತ್ತಿದೆ. ಇನ್ನೂ ಕೆಲವು ಕಡೆಗಳಲ್ಲಿ ಭೂಮಿ ಹದಗೊಳ್ಳುವಷ್ಟು ಮಳೆಯಾಗದೇ, ಭಿತ್ತನೆಗಾಗಿ ರೈತರು ಮಳೆರಾಯನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಇಂದಿನಿಂದ ರಾಜ್ಯಾಧ್ಯಂತ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.

ಈ ಬಗ್ಗೆ ಮಾಹಿತಿ ನೀಡಿರುವಂತ ರಾಜ್ಯ ಹವಾಮಾನ ಇಲಾಖೆಯು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಕೂಡ ಮಳೆಯಾಗಲಿದೆ ಎಂದು ತಿಳಿಸಿದೆ.

ಇನ್ನೂ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜುಲೈ.9ರ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಹಳದಿ ಅಲರ್ಟ್ ನೀಡಲಾಗಿದೆ.

ಉತ್ತರ ಒಳನಾಡಿನ ಕೆಲವೆಡೆ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಅಲ್ಲದೇ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.

ಅಂದಹಾಗೇ ರಾಜ್ಯಾಧ್ಯಂತ ಮುಂಗಾರು ಮಳೆಯ ಆರ್ಭಟಕ್ಕೆ ಈವರೆಗೆ 21 ಮಂದಿ ಬಲಿಯಾಗಿದ್ದರೇ, 40ಕ್ಕೂ ಹೆಚ್ಚು ಜಾನುವಾರುಗಳು ಸಾವನ್ನಪ್ಪಿದ್ದಾವೆ ಎಂಬುದಾಗಿ ನಿನ್ನೆಯಷ್ಟೇ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!