ಜನ ಮನದ ನಾಡಿ ಮಿಡಿತ

Advertisement

ವಿಪಕ್ಷ ನಾಯಕನ ಆಯ್ಕೆ ಮಾಡದೆ ಗೌರವಾನ್ವಿತ ಸದನ, ಕನ್ನಡಿಗರನ್ನು ತಮಾಷೆ ಮಾಡುತ್ತಿರುವಿರೇ?: ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.


ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ. ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕೇಳಿದೆ.


ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್ ಗೆ ಮಾತ್ರ. ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ ಎಂದು ಕಿಡಿಕಾರಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!