ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ. ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕೇಳಿದೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್ ಗೆ ಮಾತ್ರ. ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ ಎಂದು ಕಿಡಿಕಾರಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…