ಬೆಂಗಳೂರು: ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡದ ಗೌರವಾನ್ವಿತ ಸದನ, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿರುವಿರೇ ಎಂದು ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ. ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕೇಳಿದೆ.
ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಕರ್ನಾಟಕದ ಸರ್ಕಾರಕ್ಕೆ ಅಕ್ಕಿ ನೀಡಲು ನಿರಾಕರಿಸಿ, ಖಾಸಗಿ ಮಾರಾಟಕ್ಕೆ ಮುಂದಾಗಿತ್ತು ಕೇಂದ್ರ ಸರ್ಕಾರ. ಆಹಾರ ನಿಗಮದಲ್ಲಿ 3.86 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಮಾರಾಟಕ್ಕಿದ್ದರೂ ಬಿಡ್ ಆಗಿದ್ದು ಕೇವಲ 170 ಮೆಟ್ರಿಕ್ ಟನ್ ಗೆ ಮಾತ್ರ. ಉಳಿದ ಅಕ್ಕಿ ಗೋದಾಮಿನಲ್ಲಿ ಕೊಳೆತು ಹೋಗಬೇಕೆ? ಅಕ್ಕಿ ಕೊಳೆತು ಹೋದರೂ ಸರಿ ಬಡವರ ಹಸಿವಿಗೆ ಅನ್ನವಾಗಬಾರದು ಎಂಬ ಮೋದಿಯ ಜನವಿರೋಧಿ ಧೋರಣೆಯಂತಹ ಕ್ರೌರ್ಯ ಇನ್ನೊಂದಿಲ್ಲ ಎಂದು ಕಿಡಿಕಾರಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…