ಉಡುಪಿ: ಹೆಬ್ರಿ ಸಮೀಪದ ನಾಡ್ಪಾಲು ಗ್ರಾಮದಲ್ಲಿ ಮರಿ ಆನೆಯೊಂದು ಕಾಣಿಸಿಕೊಂಡಿದೆ. ರಾತೋರಾತ್ರಿ ಮರಿ ಆನೆಯನ್ನು ಕಂಡು ಸ್ಥಳೀಯ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ಮರಿ ಆನೆಯು ಕೆರೆಕಟ್ಟೆ ಪರಿಸರದಿಂದ ಆನೆಗಳ ಹಿಂಡಿನಿಂದ ತಪ್ಪಿಸಿಕೊಂಡು ಬಂದಿರುವ ಶಂಕೆ ವ್ಯಕ್ತವಾಗಿದೆ. ಹಲಸಿನ ಹಣ್ಣು ತಿನ್ನಲು ಜನವಸತಿ ಪ್ರದೇಶಕ್ಕೆ ಬಂದಿದ್ದು, ಸ್ಥಳೀಯ ಗ್ರಾಮಸ್ಥರ ಗದ್ದೆಗಳಲ್ಲಿ ದಾಂಧಲೆ ನಡೆಸಿದೆ. ಸ್ಥಳೀಯರು ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಆನೆಯನ್ನು ಸ್ಥಳದಿಂದ ಓಡಿಸಿದರು. ಪರಿಸರದ ನಾಲ್ಕಾರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅಲೆದಾಡುತ್ತಿರುವ ಶಂಕೆ ವ್ಯಕ್ತವಾಗಿದೆ. ಕಾರ್ಯಾಚರಣೆ ನಡೆಸುವ ಮೂಲಕ ಆನೆಯನ್ನು ಸೆರೆ ಹಿಡಿಯಲು ಗ್ರಾಮಸ್ಥರ ಒತ್ತಾಯಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…