ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ


ಉಡುಪಿ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ  ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು.


ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು. ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದರು.


ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.


ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!