ಜನ ಮನದ ನಾಡಿ ಮಿಡಿತ

Advertisement

ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ ಡಾ.ಸತೀಶ ಪೂಜಾರಿ ಹೃದಯಾಘಾತದಿಂದ ನಿಧನ


ಉಡುಪಿ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ  ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು.


ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು. ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದರು.


ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.


ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!