ಉಡುಪಿ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು.
ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು. ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದರು.
ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.
ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…