ಉಡುಪಿ: ಕುಂದಾಪುರ ಶ್ರೀಮಾತಾ ಅಸ್ಪತ್ರೆಯ ಆಡಳಿತ ಪಾಲುದಾರ, ಖ್ಯಾತ ಇ.ಎನ್.ಟಿ. ತಜ್ಞ ಡಾ.ಸತೀಶ ಪೂಜಾರಿ ಸಾಸ್ತಾನ ಅವರು ಗುರುವಾರ ಮುಂಜಾನೆ ಹೃದಯಾಘಾತದಿಂದ ಕೋಟ ಮಣೂರು ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 52 ವಯಸ್ಸಾಗಿತ್ತು.
ಇವರು ಕುಂದಾಪುರ ಶ್ರೀಮಾತಾ ಆಸ್ಪತ್ರೆ, ಕೋಟ ಮನಸ್ಮಿತಾ ಫೌಂಡೇಶನ್ ಮೊದಲಾದ ಸಂಸ್ಥೆಗಳ ಆಡಳಿತ ಪಾಲುದಾರರಾಗಿದ್ದರು. ಹವ್ಯಾಸಿ ಗಾಯಕರಾಗಿದ್ದ ಇವರು ಹಲವಾರು ಆಲ್ಬಂ ಸಾಂಗ್ ಗಳಿಗೆ, ಭಕ್ತಿಗೀತೆಗಳಿಗೆ ಧ್ವನಿಯಾಗಿದ್ದರು. ಸಂಗೀತ ರಸಮಂಜರಿಗಳಲ್ಲೂ ಕಾರ್ಯಕ್ರಮ ನೀಡಿದ್ದಾರೆ. ಬಿಲ್ಲವ ಯುವ ವೇದಿಕೆಯ ಸ್ಥಾಪಕ ಅಧ್ಯಕ್ಷರಾಗಿದ್ದರು.
ಡಾ. ಎಸ್. ಜಾನಕಿ ಅವರ ಕಟ್ಟಾ ಅಭಿಮಾನಿಯಾಗಿ ಪ್ರತಿ ವರ್ಷ ಕೋಟೇಶ್ವರದಲ್ಲಿ ಡಾ. ಎಸ್. ಜಾನಕಿ ರಾಷ್ಟ್ರೀಯ ಪುರಸ್ಕಾರ ಆಯೋಜಿಸಿ ನಾಡಿನ ಹಲವು ಮಂದಿ ಗಣ್ಯ ಹಾಡುಗಾರರಿಗೆ ಪ್ರಶಸ್ತಿ ಪ್ರದಾನ ಮಾಡಿದ್ದರು. ಮನಸ್ಮಿತಾ ಫೌಂಡೇಶನ್ ಮೂಲಕ ಸಮಾಜ ಸೇವೆಯಲ್ಲೂ ತೊಡಗಿಕೊಂಡಿದ್ದರು.
ಮೃತರು, ಪತ್ನಿ, ಪುತ್ರನನ್ನು ಅಗಲಿದ್ದಾರೆ. ಇಂದು ಸಂಜೆ 4.30 ರಿಂದ ಮೃತರ ಸ್ವಗೃಹ ಕೋಟ ಮಣೂರಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕುಟುಂಬ ಮೂಲಗಳು ತಿಳಿಸಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…