ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.
ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ನದೀ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದೀ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಿಲ್ಲದಕಾರಣ ಸಂಜೆ ವೇಳೆ ನೀರಿನ ಹರಿವು ಇಳಿಮುಖವಾಗಬಹುದು.ಆದರೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…