ಬಂಟ್ವಾಳ: ಬಂಟ್ವಾಳದಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಕೊಂಚ ಹೆಚ್ಚಳವಾಗಿದ್ದು, ಸದ್ಯಕ್ಕೆ ನೀರಿನ ಮಟ್ಟ 6.1 ಮೀ.ನಷ್ಟಿದೆ. ಬಂಟ್ವಾಳದಲ್ಲಿ 8 ಮೀ. ಅಪಾಯಕಾರಿ ಮಟ್ಟವಾಗಿದ್ದು, 8.5 ಮೀ. ತಲುಪಿದರೆ ಪಾಣೆಮಂಗಳೂರಿನ ಆಲಡ್ಕ ಭಾಗದಲ್ಲಿ ಪ್ರವಾಹದ ನೀರು ಮನೆಯೊಳಗೆ ನುಗ್ಗುತ್ತದೆ.
ಘಟ್ಟ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಿರುವ ಪರಿಣಾಮ ನೀರಿನ ಮಟ್ಟ ಹೆಚ್ಚಳಗೊಂಡಿದೆ.
ನೀರು ಹೆಚ್ಚಳದಿಂದ ತುಂಬೆ ಡ್ಯಾಮ್ ಎಲ್ಲಾ ಗೇಟ್ ಗಳನ್ನು ತೆರವು ಮಾಡಿದರೆ ನೀರು ತೀರಾ ಇಳಿಕೆಯಾಗುವ ಸಾಧ್ಯತೆಯೂ ಇದೆ. ಉಪ್ಪಿನಂಗಡಿಯಲ್ಲೂ ನೀರಿನ ಮಟ್ಟ ಹೆಚ್ಚಳಗೊಂಡಿದೆ ಎನ್ನಲಾಗಿದೆ.
ನದೀ ತೀರದ ನಿವಾಸಿಗಳು ಬಹಳ ಎಚ್ಚರಿಕೆಯಿಂದ ಇರಬೇಕಾಗಿದೆ. ಅನಾವಶ್ಯಕವಾಗಿ ನದೀ ತೀರಕ್ಕೆ ತೆರಳುವುದು ಅಥವಾ ನೀರಿಗೆ ಇಳಿಯುವುದು ಸರಿಯಲ್ಲ ಎಂದು ಇಲಾಖೆ ಸೂಚಿಸಿದೆ.
ಜಿಲ್ಲೆಯಲ್ಲಿ ಅಷ್ಟಾಗಿ ಮಳೆಯಿಲ್ಲದಕಾರಣ ಸಂಜೆ ವೇಳೆ ನೀರಿನ ಹರಿವು ಇಳಿಮುಖವಾಗಬಹುದು.ಆದರೆ ಯಾವುದಕ್ಕೂ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಹೇಳಲಾಗಿದೆ.
ಅಧಿಕಾರಿಗಳು ನದಿ ತೀರಕ್ಕೆ ತೆರಳಿ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…