ಉಡುಪಿ: ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕಾಪು ತಾಲೂಕಿನ ಶಂಕರಪುರದ ಸಾಲ್ಮರದಲ್ಲಿ ನಿರ್ಮಿಸಿರುವ ನೂತನ ಕೃಷ್ಣವೇಣಿ ಆಶ್ರಯಧಾಮ ಹಾಗೂ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನೆ ಇದೇ ಜುಲೈ 15ರಂದು ಸಂಜೆ 4ಗಂಟೆಗೆ ನಡೆಯಲಿದೆ ಎಂದು ಸಾಲ್ಮರ ಗೋವಿಂದ ಭಟ್ ಫ್ಯಾಮಿಲಿ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಹರಿದಾಸ್ ಭಟ್ ಹೇಳಿದರು.
ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಉಡುಪಿ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಸ್ವಾಮೀಜಿ ನೂತನ ಕಟ್ಟಡಗಳನ್ನು ಉದ್ಘಾಟಿಸಲಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ನಿಟ್ಟೆ ಎನ್ಎಂಎಎಂಐಟಿ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್, ಕುರ್ಕಾಲು ಗ್ರಾಪಂ ಅಧ್ಯಕ್ಷ ಪ್ರಶಾಂತ್ ಪೂಜಾರಿ, ಇನ್ನಂಜೆ ಗ್ರಾಪಂ ಅಧ್ಯಕ್ಷೆ ಮಾಲಿನಿ ಶೆಟ್ಟಿ, ಕಟಪಾಡಿ ಗ್ರಾಪಂ ಅಧ್ಯಕ್ಷೆ ಪ್ರಭಾ ಶೆಟ್ಟಿ, ಮಾಜಿ ಜಿಪಂ ಸದಸ್ಯೆ ಗೀತಾಂಜಲಿ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೃಷ್ಣವೇಣಿ ಆಯುರ್ವೇದ ಆಸ್ಪತ್ರೆಯ ಸಿಇಒ ಡಾ. ಐ. ರಮೇಶ್ ಮಿತ್ತಂತಾಯ, ಮುಖ್ಯ ವೈದ್ಯಾಧಿಕಾರಿ ಡಾ. ಕೆ. ಲಕ್ಷ್ಮೀಶ್ ಉಪಾಧ್ಯಾಯ ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…