ಜನ ಮನದ ನಾಡಿ ಮಿಡಿತ

Advertisement

ಉಚಿತ ಕ್ಯಾನ್ಸರ್ ಚಿಕಿತ್ಸಾ ಪರೀಕ್ಷಾ ಶಿಬಿರವನ್ನು ಪ್ರಾರಂಭಿಸಿದ ನಟ ಮೆಗಾಸ್ಟಾರ್ : ನಟನ ಕೆಲಸಕ್ಕೆ ಭಾರೀ ಮೆಚ್ಚುಗೆ!

ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚೆಗೆಯಷ್ಟೇ ಕ್ಯಾನ್ಸರ್​ ಸೆಂಟರ್​ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ​ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್​ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್​ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.

ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್​ನ ಜುಬಿಲಿ ಹಿಲ್ಸ್​​ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್‌ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.

ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್​ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಡಾ. ಮಮತಾ ಪಿ. ಶೆಟ್ಟಿ..!

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಆಂಬ್ಯುಲೆನ್ಸ್ ವಾಹನವೊಂದಕ್ಕೆ ಸೈಡ್ ಬಿಡದ ಸ್ಕೂಟರ್ ಸವಾರನ ಬಂಧನ

ಮಂಗಳೂರು: ಝಕರಿಯಾ ಜೋಕಟ್ಟೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ಸೇತುವೆ ಬಳಿ ನಾಪತ್ತೆಯಾದ ಆಟೋ ಚಾಲಕನ ಶವ ಪತ್ತೆ….!

ಮಂಗಳೂರು: ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯ ಬಂಧನ..!

ಕಡಬ: ಮದುವೆಯ ವಾಹನ ಪಲ್ಟಿ; 20ಕ್ಕೂ ಅಧಿಕ ಮಂದಿಗೆ ಗಾಯ..!

ಹುಣಸೂರು: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್ ತಂತಿ ಸ್ಪರ್ಶ, ತಾಯಿ- ಮಗ ಬಲಿ…!

ಬಂಟ್ವಾಳ: ಬಿ.ಸಿ.ರೋಡ್ ನಲ್ಲಿರುವ ಮೆಸ್ಕಾಂ ಭವನದಲ್ಲಿ ಜನಸಂಪರ್ಕ ಸಭೆ..!

error: Content is protected !!