ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇತ್ತೀಚೆಗೆಯಷ್ಟೇ ಕ್ಯಾನ್ಸರ್ ಸೆಂಟರ್ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.
ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…