ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿರುವ ನಟ ಮೆಗಾಸ್ಟಾರ್ ಚಿರಂಜೀವಿ ಸಿನಿಮಾಗಳಲ್ಲಿ ಮಾತ್ರವಲ್ಲ, ರಿಯಲ್ ಲೈಫ್ ನಲ್ಲೂ ಹಿರೋ ಅನ್ನೋದನ್ನ ಸಾಭಿತು ಮಾಡಿದ್ದಾರೆ. ಕಷ್ಟ ಎಂದು ಬಂದ ಅದೆಷ್ಟೋ ಜನರಿಗೆ ಚಿರಂಜೀವಿ ತಮ್ಮ ಕೈಲಾದ ಸಹಾಯ ಮಾಡಿದ್ದಾರೆ. ಇದೀಗ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಆರಂಭಿಸಿದ್ದಾರೆ.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಇತ್ತೀಚೆಗೆಯಷ್ಟೇ ಕ್ಯಾನ್ಸರ್ ಸೆಂಟರ್ ಒಂದನ್ನು ಉದ್ಘಾಟನೆ ಮಾಡಿದ್ದ ಚಿರಂಜೀವಿ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಮಾಡಿದ್ದರು. ಕ್ಯಾನ್ಸರ್ ತಡೆಗಟ್ಟುವುದು ಹೇಗೆ ಎಂಬುದನ್ನು ವಿವರಿಸಿದ್ದರು. ಚಿರಂಜೀವಿ ಅವರಿಗೆ ಈ ಮೊದಲು ಕ್ಯಾನ್ಸರಸ್ ಅಲ್ಲದ ಊತ ಕಾಣಿಸಿತ್ತು. ವೈದ್ಯರ ಬಳಿ ಇದನ್ನು ತಪಾಸಣೆ ಮಾಡಿಸಲಾಯಿತು. ಒಂದೊಮ್ಮೆ ಅದನ್ನು ತೆಗೆಯದೇ ಇದ್ದಿದ್ದರೆ ಅದು ಕ್ಯಾನ್ಸರ್ ಆಗಿ ಬದಲಾಗುವ ಸಾಧ್ಯತೆ ಇತ್ತು. ಈ ಕಾರಣದಿಂದಲೇ ಚಿರಂಜೀವಿ ಅವರು ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಅಭಿಮಾನಿಗಳ ಬಳಿ ಮನವಿ ಮಾಡಿದ್ದರು.
ಎಲ್ಲರ ಬಳಿಯೂ ಕ್ಯಾನ್ಸರ್ ಪರೀಕ್ಷೆ ಮಾಡಿಸಿಕೊಳ್ಳುವಷ್ಟು ಹಣ ಇರುವುದಿಲ್ಲ. ಈ ಕಾರಣದಿಂದಲೇ ಚಿರಂಜೀವಿ ಅವರು ಉಚಿತ ಕ್ಯಾನ್ಸರ್ ಚಿಕಿತ್ಸೆ ಪರೀಕ್ಷೆ ಶಿಬಿರ ಆರಂಭಿಸಿದ್ದಾರೆ. ಭಾನುವಾರ ಹೈದರಾಬಾದ್ನ ಜುಬಿಲಿ ಹಿಲ್ಸ್ನಲ್ಲಿರುವ ಚಿರಂಜೀವಿ ಬ್ಲಡ್ ಬ್ಯಾಂಕ್ನಲ್ಲಿ ಕ್ಯಾನ್ಸರ್ ಪರೀಕ್ಷೆ ನಡೆದಿದ್ದು, ಚಿತ್ರರಂಗದ ಕಾರ್ಮಿಕರು, ಅಭಿಮಾನಿಗಳು ಮತ್ತು ಸಿನಿಮಾ ಪತ್ರಕರ್ತರು ಭಾಗವಹಿಸಿ ಉಚಿತ ಕ್ಯಾನ್ಸರ್ ತಪಾಸಣೆ ಪರೀಕ್ಷೆಗೆ ಒಳಗಾದರು. ಚಿರಂಜೀವಿ ಸದ್ಯ ವಿದೇಶಿ ಪ್ರವಾಸದಲ್ಲಿದ್ದಾರೆ. ಹೀಗಾಗಿ ಅವರ ಸಹೋದರ ನಾಗ ಬಾಬು ಅವರು ಇದರ ಮೇಲುಸ್ತುವಾರಿ ವಹಿಸಿಕೊಂಡಿದ್ದರು.
ಚಿರಂಜೀವಿ ಆರಂಭಿಸಿರುವ ಸಾರ್ವಜನಿಕರಿಗಾಗಿ ಉಚಿತ ಕ್ಯಾನ್ಸರ್ ತಪಾಸಣೆ ಶಿಬಿರದ ಮೊದಲ ಶಿಬಿರ ಭಾನುವಾರ ಹೈದರಾಬಾದ್ನಲ್ಲಿ (ಜುಲೈ 9) ನಡೆದಿದೆ. ಈ ವೇಳೆ ಎರಡು ಸಾವಿರಕ್ಕೂ ಅಧಿಕ ಮಂದಿ ತಪಾಸಣೆಗೆ ಒಳಗಾಗಿದ್ದು, ಚಿರಂಜೀವಿ ಅವರ ಈ ಕೆಲಸಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…