ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು: ಕೆವಿಪಿ
ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ: ಕೆ.ವಿ.ಪ್ರಭಾಕರ್
ಕಾಸರಗೋಡು : ಕಾಸರಗೋಡು ಕನ್ನಡಿಗರಿಗೆ ಸರ್ಕಾರ ಧ್ವನಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಇಲ್ಲಿ ಪತ್ರಕರ್ತರ ಸಂಘದ ವತಿಯಿಂದ ನಡೆದ ದತ್ತಿನಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೊರನಾಡಿನ ಕನ್ನಡಿಗರ ಅಭಿಮಾನ ದೊಡ್ಡದು. ವಿಶೇಷವಾಗಿ ಕಾಸರಗೋಡು ಕನ್ನಡಿಗರ ಭಾವನೆ ಅರ್ಥವಾಗುತ್ತದೆ. ನಿಮ್ಮ ಜೊತೆಯಲ್ಲಿ ಕರ್ನಾಟಕ ಸರ್ಕಾರ ಸದಾ ಇದೆ. ನಿಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಗಡಿ ನಾಡಿನ ಕಾಸರಗೊಡು ಪತ್ರಕರ್ತರ ಬಸ್ ಪಾಸ್ ಕೊಡಿಸುವ ಭರವಸೆ ನೀಡಿದ ಕೆ.ವಿ.ಪ್ರಭಾಕರ್ ಅವರು, ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಸಿಎಂ ಜೊತೆಗೆ ಮಾತನಾಡಿ ಅನುದಾನ ಒದಗಿಸುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ನಾವು ರಾಜ್ಯೋತ್ಸವ ಕನ್ನಡಿಗರಾಗಿದ್ದೇವೆ. ಆದರೆ ನೀವು ವರ್ಷದ ಅನುಕಾಲವೂ ಕನ್ನಡ ಭಾಷೆ ಉಳಿಸುವ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ಮತ್ತು ಅಭಿಮಾನದ ಸಂಗತಿ ಎಂದರು. ಕಾಸರಗೋಡು ದತ್ತಿ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಶಾಸಕ ಎ.ಕೆ.ಎಂ.ಅಶ್ರಫ್, ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕೆಯುಡಬ್ಲ್ಯೂಜೆ ಕೇರಳ ಘಟಕ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಮತ್ತಿತರರು ಹಾಜರಿದ್ದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…