ಪುತ್ತೂರು ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಪುಡಾ ಅಧ್ಯಕ್ಷ ಸ್ಥಾನಕ್ಕೆ ಕೆ ಭಾಸ್ಕರ ಕೋಡಿಂಬಾಳರವರು ದಿಢೀರ್ ರಾಜೀನಾಮೆ ನೀಡಿದರು.
ಪುತ್ತೂರು ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.ಜೂ 11 ರಂದು ಬೆಂಗಳೂರಿನಿಂದ ಕರೆ ಮಾಡಿದ ಶಾಸಕರ’ ಪುಡಾ ( ಪುತ್ತೂರು ನಗರ ಅಭಿವೃದ್ದಿ ಯೋಜನಾ ಪ್ರಾಧಿಕಾರ) ಸತ್ತಿದೆ. ನಿಮ್ಮ ಕಾರ್ಯವೈಖರಿ . ಇನ್ನು ಈ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ” ಎಂದರು.
ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಆರಂಭಿಸಿದವತ್ತೆ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ 6 ರವರೆಗೆ ಇತ್ತು. ಬಳಿಕ ಸಿಕ್ಕಿದ 22 ದಿನದಲ್ಲಿ ಕಟ್ ಕನ್ವರ್ಶನ್ ಹಾಗೂ ಶ್ರೀ ಮಹಾಲೀಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ.
ನನ್ನನ್ನು ಯಾವುದೇ ಶಿಫಾರಸ್ಸು ಇಲ್ಲದೆ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಪತ್ರಿಕಾಗೋಷ್ಚಿಯಲ್ಲಿ ತಿಳಿಸಿದರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…