ಬೆಂಗಳೂರು : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಮಕ್ಕಳಿಗೆ 2 ಜೊತೆ ಸಮವಸ್ತ್ರದ ಬಟ್ಟೆಯನ್ನು ಮಾತ್ರ ನೀಡಲಿದ್ದು, ಬಟ್ಟೆಯನ್ನು ಹೊಲಿಸುವ ಖರ್ಚು-ವೆಚ್ಚವನ್ನು ಪೋಷಕರೇ ಭರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10 ನೇ ತರಗತಿಯ 45,45,749 ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯುವ ಸಿದ್ದ ಸಮವಸ್ತ್ರವನ್ನು ಮಾತ್ರ ನೀಡಲು ಮುಂದಾಗಿದ್ದು, ಪೋಷಕರಿಗೆ ಸಮವಸ್ತ್ರದ ಬಟ್ಟೆಯನ್ನು ಹೊಲಿಸಿಕೊಳ್ಳುವ ವೆಚ್ಚ ಭರಿಸಬೇಕಾಗಿದೆ.
ಈಗಾಗಲೇ ಮಕ್ಕಳಿಗೆ ಒಂದು ಜೊತೆ ಸಿದ್ದಪಡಿಸಿದ ಸಮವಸ್ತ್ರ ವಿತರಿಸಿರುವ ಶಿಕ್ಷಣ ಇಲಾಖೆ 2 ನೇ ಜೊತೆ ಸಮವಸ್ತ್ರವನ್ನು ನೀಡುತ್ತಿದೆ. ಸಮವಸ್ತ್ರ ಸರಬರಾಜಿಗೆ ಟೆಂಡರ್ ಪಡೆದಿದ್ದ ಮಹಾರಾಷ್ಟ್ರ ಮೂಲದ ಕಂಪನಿಯಿಂದ ಈಗ ಸರಬರಾಜು ಪ್ರಕ್ರಿಯೆ ಆರಂಭಿಸಿದ್ದು, ಬಟ್ಟೆಯನ್ನು ಮಾತ್ರ ಕಂಪನಿ ಸರಬರಾಜು ಮಾಡಲಿದೆ. ಹೊಲಿಕೆಯ ವೆಚ್ಚ ಅಂದಾಜು 600-700 ರೂ.ಗಳನ್ನು ಪೋಷಕರೇ ಭರಿಸಬೇಕು ಎಂದು ಇಲಾಖೆ ತಿಳಿಸಿದೆ. ಇದರಿಂದ ಬಡಕುಟುಂಬದ ವಿಧ್ಯಾರ್ಥಿಗಳಿಗೆ ಕಷ್ಟ ಎದುರಾಗಲಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…