ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಡೆಂಗ್ಯೂ ಜ್ವರಕ್ಕೆ ದ.ಕ. ಜಿಲ್ಲೆಯ ವ್ಯಕ್ತಿ ಬಲಿ


ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.


ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದು‌ಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!