ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.
ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದುಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…