ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.
ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದುಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…