ರಾಜ್ಯವೇ ಡೆಂಗ್ಯೂ ಹಾಟ್ ಸ್ಪಾಟ್ ಆಗಿ ಮಾರ್ಪಾಡು ಆಗಿದ್ದರು ಕೂಡ ಜಿಲ್ಲೆಯಲ್ಲಿ ಈವರೆಗೆ ಪ್ರಾಣ ಹಾನಿಯಾಗಿರಲಿಲ್ಲ. ಇಂದು ಮೂಲತಃ ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ನಿವಾಸಿಯಾಗಿದ್ದು,ಪ್ರಸ್ತುತ ಪುತ್ತೂರಿನಲ್ಲಿ ವಾಸವಾಗಿರುವ ಯತೀಶ್ ( 52) ಎಂಬಾತನನ್ನು ಡೆಂಗ್ಯೂ ಜ್ವರ ಬಲಿ ತೆಗೆದುಕೊಂಡಿದೆ.
ಅತಿಯಾದ ಜ್ವರದಿಂದ ಬಳಲುತ್ತಿದ್ದ ಯತೀಶ್ ಅವರು ಜುಲೈ 10 ರಂದು ಬುಧವಾರ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಅದಾಗಲೇ ತೀವ್ರ ಜ್ವರಕ್ಕೆ ಈಡಾಗಿರುವ ಈತನನ್ನು ಐಸಿಯು ನಲ್ಲಿ ಚಿಕಿತ್ಸೆ ಗಾಗಿ ದಾಖಲಿಸಲಾಗಿತ್ತು ಎಂದು ಇಲ್ಲಿನ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. ಆದರೆ ಅದಾಗಲೇ ಪರಿಸ್ಥಿತಿ ಕೈ ಮೀರಿಹೋಗಿದ್ದು ಈತ ಚಿಕಿತ್ಸೆಗೆ ಸ್ಪಂದಿಸದ ಇರುವ ಕಾರಣದಿಂದ ಈತನನ್ನು ಅದೇ ದಿನ ಸಂಜೆ ವೇಳೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಸಲಾಗಿತ್ತು.
ಆದರೆ ಈದಿನ ಚಿಕಿತ್ಸೆಗೆ ಸ್ಪಂದಿಸದೆ ಈತ ಕೊನೆಯುಸಿರೆಳೆದಿದ್ದಾನೆ ಎಂದುಮೂಲಗಳು ತಿಳಿಸಿವೆ.
ಮೂಲತಃ ಶಂಭೂರು ಗರಡಿ ನಿವಾಸಿಯಾಗಿರುವ ಯತೀಶ್ ಅವರು ಇತ್ತೀಚಿಗೆ ಪತ್ನಿಯ ತವರೂರು ಪುತ್ತೂರಿನಲ್ಲಿ ಮನೆ ಮಾಡಿ ಅಲ್ಲಿ ವಾಸವಾಗಿದ್ದರು.
ಭಾರತ್ ಬೀಡಿ ಕಂಪೆನಿಯ ಬಿಸಿರೋಡಿನ ಶಾಖೆಯಲ್ಲಿ ಸಿಬ್ಬಂದಿಯಾಗಿದ್ದ ಇವರು ಜ್ವರದ ಸಂಧರ್ಭದಲ್ಲಿ ಅಲ್ಲಿಯ ಜೊತೆಗಾರ ಸಿಬ್ಬಂದಿ ಜೊತೆ ಬಂಟ್ವಾಳ ಆಸ್ಪತ್ರೆಗೆ ದಾಖಲಾಗಿದ್ದರು.
ಯತೀಶ್ ಅವರು ಉತ್ತಮ ಗುಣನಡತೆಯಿಂದ ಶಂಭೂರು ಗ್ರಾಮದಲ್ಲಿ ಚಿರಪರಿಚಿತರಾಗಿದ್ದರು. ಪತ್ನಿ ಹಾಗೂ ಎರಡು ಹೆಣ್ಮಕ್ಕಳು ಸಹಿತ ಅಪಾರ ಗೆಳೆಯರನ್ಬು ಅಗಲಿದ್ದಾರೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…