ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ಸೋಮಣ್ಣ ರವರು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ ಯೋಧರ ನೆನಪಿಗಾಗಿ ನಿರ್ಮಿಸಲಾಗಿದ ಯುದ್ಧ ಸ್ಮಾರಕದ ಅಭಿವೃದ್ಧಿ ಮಾಡುವ ಭಾಗ್ಯ ಈ ಭಾಗದ ಜನಪ್ರತಿನಿಧಿಗಳಿಗೆ ಸಿಕ್ಕಿರುವುದು ಪುಣ್ಯ ಕಾರ್ಯ. ಯುದ್ದ ಸ್ಮಾರಕದ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ರ 25 ಲಕ್ಷ ವಿಶೇಷ ಅನುದಾನ ಲಭಿಸಿದ್ದು, ಮನಪಾ ಉಳಿದ ಖರ್ಚು ಭರಿಸುವ ಭರವಸೆ ನೀಡಿದೆ. ಅಂತೆಯೇ ನಾನು ಕೂಡಾ ನನ್ನ ಒಂದು ತಿಂಗಳ ವೇತನವಾದ 1 ಒಂದು ಲಕ್ಷವನ್ನು ಈ ಪುಣ್ಯ ಕಾರ್ಯಕ್ಕೆ ಸಮರ್ಪಿಸುತ್ತೇನೆ ಎಂದು ಘೋಷಿಸಿದರು.
ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಸೈನಿಕರು ಈ ದೇಶದ ಹೆಮ್ಮೆ. ಅವರ ತ್ಯಾಗಕ್ಕೆ ಎಂದಿಗೂ ಸಾಟಿಯಿಲ್ಲ. ಅವರನ್ನು ಗೌರವಿಸುವುದು ನಮ್ಮೆಲ್ಲರ ಜವಾಬ್ದಾರಿ. ಈ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಶೀಘ್ರದಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು,ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ಕಮಲಾಕ್ಷಿ, ಕುಸುಮ ದೇವಾಡಿಗ, ಸಂದ್ಯಾ ವೆಂಕಟೇಶ್, ಕ್ಯಾ. ಗಣೇಶ್ ಕಾರ್ಣಿಕ್, ಮನಪಾ ಸದಸ್ಯರುಗಳು, ಮಾಜಿ ಸೈನಿಕ ಸಂಘದ ಅಧ್ಯಕ್ಷ ಶ್ರೀಕಾಂತ್ ಸೇರಿದಂತೆ ಬಿಜೆಪಿಯ ಅನೇಕ ಪ್ರಮುಖರು ಉಪಸ್ಥಿತರಿದ್ದರು.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…